ಬ್ರೇಕಿಂಗ್ ನ್ಯೂಸ್
16-06-21 04:21 pm Source: Vijaya Karnataka ಸಿನಿಮಾ
ಬೆಂಗಳೂರು: ಅರ್ಧದಲ್ಲೇ ನಿಂತಿದ್ದ ಬಿಗ್ಬಾಸ್ ಮತ್ತೆ ಪ್ರಾರಂಭವಾಗಲಿದೆ. ಬಿಗ್ಬಾಸ್ ಪ್ರಸಾರವಾಗುವ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅಧಿಕೃತವಾಗಿ ಮಾಹಿತಿಯನ್ನು ನೀಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಮೇಶ್ವರ್ ಗುಂಡ್ಕಲ್ ಹೇಳಿದ್ದು ಹೀಗಿದೆ
ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.


ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು..
ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.
ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ.
(Kannada Copy of Vijayakarnataka)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm