ಬ್ರೇಕಿಂಗ್ ನ್ಯೂಸ್
29-06-21 11:05 am Filmbeat : Shruthi K ಸಿನಿಮಾ
ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ತಾಯಿಯಾದ ಸಂಭ್ರಮದಲ್ಲಿದ್ದಾರೆ. ನಯನಾ ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ಅಮೆರಿಕದಲ್ಲಿ ನೆಲೆಸಿರುವ ನಯನಾ ಅಲ್ಲೇ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ.
ಸಂತಸದ ವಿಚಾರವನ್ನು ನಯನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮುದ್ದು ಮಗುವಿನ ಹಸ್ತದ ಫೋಟೋ ಶೇರ್ ಮಾಡಿ, ಗಂಡು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಟೆಂಪಲ್ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ನಯನಾ ಪತಿ ಚರಣ್ ಜೊತೆ ಅಮೆರಿಕದಲ್ಲಿ ವಾಸಿಸುತ್ತಿದ್ದಾರೆ.
ಮದುವೆ ಬಳಿಕ ಸಿನಿಮಾರಂಗದಿಂದ ದೂರ ಇರುವ ನಯನ ಬಳಿಕ ಪತಿ ಜೊತೆ ಅಮೆರಿಕಗೆ ತೆರಳಿದರು. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಯನಾ ಸದಾ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಜನವರಿಯಲ್ಲಿ ತಾಯಿಯಾಗುತ್ತಿರುವ ಸಂತಸದ ವಿಚಾರವನ್ನು ನಯನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಇತ್ತೀಚಿಗಷ್ಟೆ ಕೊರೊನಾ ವ್ಯಾಕ್ಸಿನ್ ಪಡೆದ ಫೋಟೋವನ್ನು ಅಪ್ ಡೇಟ್ ಮಾಡಿದ್ದರು. ಇದೀಗ ತಾಯಿಯಾದ ನಯನಾಗೆ ಅಭಿಮಾನಿಗಳು, ಸ್ನೇಹಿತರು ಹಿತೈಶಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನಟಿ ನಯನಾ ರಿಯಾಲಿಟಿ ಶೋ ಮೂಲಕ ಕನ್ನಡಿಗರ ಮನೆಮಾತಾಗಿದ್ದರು. 'ಪ್ಯಾಟಿ ಹುಡುಗೀರ ಹಳ್ಳಿ ಲೈಫ್' ರಿಯಾಲಿಟಿ ಶೋ ಮೂಲಕ ಕನ್ನಡಿಗರಿಗೆ ಪರಿಚಿತರಾದ ನಯನಾ ಬಳಿಕ ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಮಿಂಚಿದ್ದರು. ವಿನಯ್ ರಾಜ್ ಕುಮಾರ್ ನಟನೆಯ ಸಿದ್ಧಾರ್ಥ ಸಿನಿಮಾ ಸೇರಿದಂತೆ ಇನ್ನು ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ.
2018ರಲ್ಲಿ ನಯನಾ, ಚರಣ ತೇಜ್ ಜೊತೆ ಹಸೆಮಣೆ ಏರಿದರು. ವಿವಾಹ ಬಳಿಕ ನಯನಾ ಸಿನಿಮಾರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋ ಎಂಟ್ರಿ ಕೊಟ್ಟಿದ್ದರು. ಕನ್ನಡ ಬಿಗ್ ಬಾಸ್ ಸೀಸನ್ 6ರಲ್ಲಿ ನಯನಾ ಸ್ಪರ್ಧಿಯಾಗಿ ಭಾಗಿಯಾಗಿದ್ದರು.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm