ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm