ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm