ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
24-05-26 09:01 pm
HK News Staffer
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am