ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm