ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
02-07-26 04:21 pm
HK News Staffer
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm
ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಶನ್ ಬಳಿ ಯ...
01-07-26 09:34 pm
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm