ಬ್ರೇಕಿಂಗ್ ನ್ಯೂಸ್
01-09-20 03:43 pm Dhruthi Anchan - Correspondent ಸಿನಿಮಾ
ಬೆಂಗಳೂರು, ಸೆಪ್ಟೆಂಬರ್ 01: ಕಿಚ್ಚ ಸುದೀಪ್ ಅವರ ಈ ಬಾರಿಯ ಹುಟ್ಟುಹಬ್ಬ ಹಲವು ರೀತಿಯಲ್ಲಿ ವಿಶೇಷತೆಯನ್ನು ಹೊಂದಿದೆ. ಈ ವರ್ಷದ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಅವರ ಬಯೋಗ್ರಫಿ ಬಿಡುಗಡೆಯಾಗಲಿದ್ದು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಿಚ್ಚ ಅವರ ಬೈಯೋಗ್ರಫಿಯನ್ನು ನಾಳೆ ಬೆಳಗ್ಗೆ 11:30 ಕ್ಕೆ ಬಿಡುಗಡೆ ಮಾಡಲಿದ್ದಾರೆ.
ಸುದೀಪ್ ಅವರ ಬದುಕಿನ ಸಮಗ್ರ ಚಿತ್ರಣ ಇರುವ ಈ ಪುಸ್ತಕವನ್ನು ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಡಾ. ಶರಣು ಹುಲ್ಲೂರು ಬರೆದಿದ್ದಾರೆ. 'ಕಿಚ್ಚ' ಸುದೀಪ್ ಬಣ್ಣದ ಲೋಕಕ್ಕೆ ಬಂದು 25 ವರ್ಷ ತುಂಬಿದ ಈ ಸಂದರ್ಭದಲ್ಲಿ ಅವರ ಬಯೋಗ್ರಫಿ ಬಿಡುಗಡೆ ಆಗುತ್ತಿರುವುದು ವಿಶೇಷ. ಈವರೆಗೂ ಎಲ್ಲಿಯೂ ಕಾಣದೇ ಇರುವಂತಹ ಸುದೀಪ್ ಅವರ ಅನೇಕ ಫೋಟೋಗಳು, ಮಾಹಿತಿಗಳು ಈ ಪುಸ್ತಕದಲ್ಲಿ ಇದೆಯೆಂದು ಹೇಳಿದ್ದಾರೆ .

ಸುದೀಪ್ ಕುರಿತು ಅವರ ಕುಟುಂಬದವರು ಮಾತನಾಡಿದ್ದಾರೆ. ಸುದೀಪ್ ಅವರ ಬಾಲ್ಯದಿಂದ ಈವರೆಗಿನ ಅನೇಕ ಸಂಗತಿಗಳನ್ನು ಈ ಪುಸ್ತಕದಲ್ಲಿ ದಾಖಲಿಸಲಾಗಿದ್ದು, ಸಿನಿಮಾರಂಗದ ಅನೇಕ ಘಟನೆಗಳಿಗೆ ಈ ಪುಸ್ತಕ ಸಾಕ್ಷಿಯಾಗಲಿದೆ. 'ನನ್ನ ಪಾಲಿಗೆ ಇದೊಂದು ಸಂಭ್ರಮದ ಕ್ಷಣ. ಕನ್ನಡದ ನಟನೊಬ್ಬ ಹಾಲಿವುಡ್ವರೆಗೂ ತಲುಪಿದ್ದು ವಿಶೇಷ ಸಂಗತಿ. 'ಕಿಚ್ಚ' ಸುದೀಪ್ ಅವರ ಸಮಗ್ರ ಮಾಹಿತಿಯನ್ನು ಒಳಗೊಂಡಿರುವ ಪುಸ್ತಕ ಇದಾಗಿದ್ದು, ಅಪರೂಪದ ಅನೇಕ ಫೋಟೋಗಳನ್ನು ಬಳಸಲಾಗಿದೆ. ಈವರೆಗೂ ಆ ಫೋಟೋಗಳನ್ನು ಯಾರೂ ನೋಡಿರಲು ಸಾಧ್ಯವಿಲ್ಲ. ಅಲ್ಲದೇ, ಸುದೀಪ್ ಅವರ ತಂದೆ, ತಾಯಿ, ಅಕ್ಕಂದಿರು, ಪತ್ನಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಸುದೀಪ್ ಅವರ ಪುತ್ರಿ, ಅಪ್ಪನಿಗಾಗಿ ಪತ್ರ ಬರೆದಿದ್ದಾರೆ. ಕಿಚ್ಚನ ಬದುಕಿನ ಅನೇಕ ಆಸಕ್ತಿಕರ ಸಂಗತಿಗಳನ್ನು ಒಳಗೊಂಡಿರುವ ಪುಸ್ತಕ ಇದಾಗಿದೆ. ಸುದೀಪ್ ಅವರ ಕುರಿತಾಗಿ ಬರುತ್ತಿರುವ ಮೊದಲ ಪುಸ್ತಕ ಇದಾಗಿದೆ ಎನ್ನುವುದು ನನಗೆ ಹೆಮ್ಮೆ' ಎನ್ನುತ್ತಾರೆ ಲೇಖಕ ಶರಣು ಹುಲ್ಲೂರು.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm