ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.

ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm