ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.

ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm