ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.
ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
22-04-25 10:13 pm
Bangalore Correspondent
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm