ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.

ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm