ಬ್ರೇಕಿಂಗ್ ನ್ಯೂಸ್
01-07-21 10:55 am Filmbeat ಸಿನಿಮಾ
ಬಾಲಿವುಡ್ ಖ್ಯಾತ ನಟಿ ಮಂದಿರ ಬೇಡಿ ಪತಿ ಹಾಗೂ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಜ್ ಕೌಶಲ್ ಹಠಾತ್ ನಿಧನ ಇಡೀ ಬಾಲಿವುಡ್ ಗೆ ಶಾಕ್ ನೀಡಿದೆ. 49 ವರ್ಷದ ರಾಜ್ ಕೌಶಲ್ ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾದರು.
ರಾಜ್ ಕೌಶಲ್ ನಿಧನದ ಶಾಕ್ ನಲ್ಲೇ ಬಾಲಿವುಡ್ ನ ಅನೇಕ ಮಂದಿ ಟ್ವಿಟರ್ ಮೂಲಕ ಸಂತಾಪ ಸೂಚಿಸಿದರು. ಇನ್ನು ಕೆಲವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಪತಿಯನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿದ್ದ ನಟಿ, ರಾಜ್ ಕೌಶಲ್ ಪತ್ನಿ ಮಂದಿರಾ ಬೇಡಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಪತಿಯ ಶವದ ಮುಂದೆ ಕಣ್ಣೀರಿಡುತ್ತಿದ್ದ ಮಂದಿರಾ ಬೇಡಿಯನ್ನು ನಟ ರೋಹಿತ್ ರಾಯ್ ಸಮಾಧಾನ ಪಡಿಸಿದರು. ರಾಜ್ ಕೌಶಲ್ ಅಂತ್ಯಕ್ರಿಯೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅತ್ಯಂತ ಸ್ಟ್ರಾಂಗ್ ಮತ್ತು ಬೋಲ್ಡ್ ನಟಿ ಮಂದಿರ ಬೇಡಿ ಸಂಪ್ರದಾಯ ಮೀರಿ ಪತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ.
ಹಿಂದೂ ಸಂಪ್ರದಾಯದ ಪ್ರಕಾರ ಪುರುಷರು ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಮಾಡುತ್ತಾರೆ. ಶವದ ಮಂದೆ ಹೊತ್ತು ಸಾಗುವ ಮಡಿಕೆಯನ್ನು ಮಹಿಳೆಯರು ಸ್ಪರ್ಶಿಸುವುದಿಲ್ಲ. ಆದರೆ ಮಂದಿರಾ ಬೇಡಿ ಸಂಪ್ರದಾಯ ಮೀರಿ ತಾವೆ ಮಡಿಕೆ ಹೊತ್ತು ಸಾಗುವ ಮೂಲಕ ಪತಿಯ ಅಂತಿಮ ವಿಧಿವಿಧಾನಗಳನ್ನು ಮಾಡಿದ್ದಾರೆ. ಅಂತ್ಯಕ್ರಿಯೆ ವೇಳೆ ಬಾಲಿವುಡ್ ಗಣ್ಯರಾದ ಅನೀಶ್ ಚೌಧರಿ, ರೋಹಿತಿ ರಾಯ್, ಅಪೂರ್ವ ಅಗ್ನಿಹೋತ್ರ, ಹುಮಾ ಖುರೇಷಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಎಲ್ಲರೂ ಮಂದಿರ ಬೇಡಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

1999ರಲ್ಲಿ ಮಂದಿರಾ ಬೇಡಿ, ರಾಜ್ ಕೌಶಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮಂದಿರ 2011ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ನಂತರ ಎರಡನೇ ಮಗುವನ್ನು ದತ್ತು ಪಡೆದರು.
ರಾಜ್ ಕೌಶಲ್ 90 ಮತ್ತು 2000 ದಶಕದಲ್ಲಿ ಹೆಚ್ಚು ಸಕ್ರಿಯರಾಗಿದ್ದರು. 'ಶಾದಿ ಕಾ ಲಡ್ಡೂ' (2004) ಮತ್ತು 'ಪ್ಯಾರ್ ಮೇ ಕಭಿ ಕಭಿ' (1999) ಚಿತ್ರಗಳನ್ನು ನಿರ್ದೇಶಿಸಿ ನಿರ್ಮಿಸಿದ್ದರು. ಕೌಶಲ್ ಕೊನೆಯ ನಿರ್ದೇಶನದ ಸಿನಿಮಾ 2006 ರಲ್ಲಿ ಬಿಡುಗಡೆಯಾದ 'ಆಂಥೋನಿ ಕೌನ್ ಹೈ'. ಈ ಚಿತ್ರದಲ್ಲಿ ಅರ್ಷದ್ ವಾರ್ಸಿ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.
(Kannada Copy of Filmbeat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm