ಬ್ರೇಕಿಂಗ್ ನ್ಯೂಸ್
01-07-21 10:55 am Filmbeat ಸಿನಿಮಾ
ಬಾಲಿವುಡ್ ಖ್ಯಾತ ನಟಿ ಮಂದಿರ ಬೇಡಿ ಪತಿ ಹಾಗೂ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಜ್ ಕೌಶಲ್ ಹಠಾತ್ ನಿಧನ ಇಡೀ ಬಾಲಿವುಡ್ ಗೆ ಶಾಕ್ ನೀಡಿದೆ. 49 ವರ್ಷದ ರಾಜ್ ಕೌಶಲ್ ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾದರು.
ರಾಜ್ ಕೌಶಲ್ ನಿಧನದ ಶಾಕ್ ನಲ್ಲೇ ಬಾಲಿವುಡ್ ನ ಅನೇಕ ಮಂದಿ ಟ್ವಿಟರ್ ಮೂಲಕ ಸಂತಾಪ ಸೂಚಿಸಿದರು. ಇನ್ನು ಕೆಲವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಪತಿಯನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿದ್ದ ನಟಿ, ರಾಜ್ ಕೌಶಲ್ ಪತ್ನಿ ಮಂದಿರಾ ಬೇಡಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಪತಿಯ ಶವದ ಮುಂದೆ ಕಣ್ಣೀರಿಡುತ್ತಿದ್ದ ಮಂದಿರಾ ಬೇಡಿಯನ್ನು ನಟ ರೋಹಿತ್ ರಾಯ್ ಸಮಾಧಾನ ಪಡಿಸಿದರು. ರಾಜ್ ಕೌಶಲ್ ಅಂತ್ಯಕ್ರಿಯೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅತ್ಯಂತ ಸ್ಟ್ರಾಂಗ್ ಮತ್ತು ಬೋಲ್ಡ್ ನಟಿ ಮಂದಿರ ಬೇಡಿ ಸಂಪ್ರದಾಯ ಮೀರಿ ಪತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ.
ಹಿಂದೂ ಸಂಪ್ರದಾಯದ ಪ್ರಕಾರ ಪುರುಷರು ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಮಾಡುತ್ತಾರೆ. ಶವದ ಮಂದೆ ಹೊತ್ತು ಸಾಗುವ ಮಡಿಕೆಯನ್ನು ಮಹಿಳೆಯರು ಸ್ಪರ್ಶಿಸುವುದಿಲ್ಲ. ಆದರೆ ಮಂದಿರಾ ಬೇಡಿ ಸಂಪ್ರದಾಯ ಮೀರಿ ತಾವೆ ಮಡಿಕೆ ಹೊತ್ತು ಸಾಗುವ ಮೂಲಕ ಪತಿಯ ಅಂತಿಮ ವಿಧಿವಿಧಾನಗಳನ್ನು ಮಾಡಿದ್ದಾರೆ. ಅಂತ್ಯಕ್ರಿಯೆ ವೇಳೆ ಬಾಲಿವುಡ್ ಗಣ್ಯರಾದ ಅನೀಶ್ ಚೌಧರಿ, ರೋಹಿತಿ ರಾಯ್, ಅಪೂರ್ವ ಅಗ್ನಿಹೋತ್ರ, ಹುಮಾ ಖುರೇಷಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಎಲ್ಲರೂ ಮಂದಿರ ಬೇಡಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.
1999ರಲ್ಲಿ ಮಂದಿರಾ ಬೇಡಿ, ರಾಜ್ ಕೌಶಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮಂದಿರ 2011ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ನಂತರ ಎರಡನೇ ಮಗುವನ್ನು ದತ್ತು ಪಡೆದರು.
ರಾಜ್ ಕೌಶಲ್ 90 ಮತ್ತು 2000 ದಶಕದಲ್ಲಿ ಹೆಚ್ಚು ಸಕ್ರಿಯರಾಗಿದ್ದರು. 'ಶಾದಿ ಕಾ ಲಡ್ಡೂ' (2004) ಮತ್ತು 'ಪ್ಯಾರ್ ಮೇ ಕಭಿ ಕಭಿ' (1999) ಚಿತ್ರಗಳನ್ನು ನಿರ್ದೇಶಿಸಿ ನಿರ್ಮಿಸಿದ್ದರು. ಕೌಶಲ್ ಕೊನೆಯ ನಿರ್ದೇಶನದ ಸಿನಿಮಾ 2006 ರಲ್ಲಿ ಬಿಡುಗಡೆಯಾದ 'ಆಂಥೋನಿ ಕೌನ್ ಹೈ'. ಈ ಚಿತ್ರದಲ್ಲಿ ಅರ್ಷದ್ ವಾರ್ಸಿ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.
(Kannada Copy of Filmbeat Kannada)
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm