ನಟ ಜಗ್ಗೇಶ್ ಪುತ್ರನ ಕಾರು ಅಪಘಾತ: ಅಪಾಯದಿಂದ ಪಾರು

01-07-21 02:14 pm       Filmbeat : Bharath Kumar K   ಸಿನಿಮಾ

ಕನ್ನಡದ ಹಿರಿಯ ನಟ, ಜಗ್ಗೇಶ್ ಅವರ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿ ಯಾವುದೇ ಅಪಾಯವಿಲ್ಲ ಎಂದು ತಿಳಿದು ಬಂದಿದೆ.

ಕನ್ನಡದ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಅವರ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು-ಹೈದರಾಬಾದ್‌ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಜಗ್ಗೇಶ್ ಪುತ್ರ ಯತಿರಾಜ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಆಗಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿದು ಬಂದಿದೆ.



ಕಾರನ್ನು ಸ್ವತಃ ಯತಿರಾಜ್ ಡ್ರೈವ್ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಈ ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ಯತಿರಾಜ್ ಆರೋಗ್ಯ ಸ್ಥಿತಿ ಚೆನ್ನಾಗಿದೆ.

ಅಪಘಾತ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಯತಿರಾಜ್ ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಪಘಾತದ ರಭಸಕ್ಕೆ ಯತಿರಾಜ್ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.

(Kannada Copy of Filmbeat Kannada)