ಬ್ರೇಕಿಂಗ್ ನ್ಯೂಸ್
02-07-21 10:55 am Filmbeat : Shruthi K ಸಿನಿಮಾ
ಸ್ಯಾಂಡಲ್ ವುಡ್ ನ ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಕಾರು ನಿನ್ನೆ (ಜುಲೈ 1) ಬೆಂಗಳೂರು-ಹೈದರಾಬಾದ್ ಹೆದ್ದಾರಿ ಅಗಲಗುರ್ಕಿ ಬಳಿ ಅಪಘಾತಕ್ಕೆ ಇಡಾಗಿತ್ತು. ಅದೃಷ್ಟವಶಾತ್ ಯತಿರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸದ್ಯ ಯತಿರಾಜ್ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ
ಪುತ್ರನ ಆರೋಗ್ಯದ ಬಗ್ಗೆ ಸ್ವತಃ ಜಗ್ಗೇಶ್ ಟ್ವೀಟ್ ಮಾಡಿದ್ದು ಮಗನಿಗೆ ಬಹಳ ಒಳ ಏಟು ಬಿದ್ದಿದೆ ಎಂದು ಹೇಳಿದ್ದಾರೆ. ನಿನ್ನೆ ಅಪಘಾತದ ಬಳಿಕ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಜಗ್ಗೇಶ್ ಅಪಘಾತದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬಳಿಕ ಟ್ವೀಟ್ ಡಿಲೀಟ್ ಮಾಡಿದ್ದರು. ಜಗ್ಗೇಶ್ ಟ್ವೀಟ್ ಡಿಲೀಟ್ ಮಾಡಿದ್ದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು.
ಬಳಿಕ ಮತ್ತೆ ಟ್ವೀಟ್ ಮಾಡಿ ಜಗ್ಗೇಶ್ ಮಗನ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಜೊತೆಗೆ ಟ್ವೀಟ್ ಡಿಲೀಟ್ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

"ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನು ಬಯಸದೆ. ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆ ಹಾಕುವ ಮೌನಯೋಗಿ ಅಪ್ಪ. ಇಂದು ಬಹಳ ನೆನಪಾದ ನನ್ನ ಅಪ್ಪ. ಅವನ ತ್ಯಾಗದ ಮುಂದೆ ಇಂದು ನಾನು ತೃಣ ಎನಿಸಿತು. ಮಗನಿಗೆ ಬಹಳ ಒಳ ಏಟು ಬಿದ್ದಿದೆ, ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು. ಚಿಕಿತ್ಸೆ ನಡೆಯುತ್ತಿದೆ" ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ ಕೆಟ್ಟ ಭಯ ಆವರಿಸುತ್ತಿದೆ. ಮನೆಯವರು ನೋಡದಂತೆ ವಿನಂತಿ ಮಾಡಿದರು ಹಾಗಾಗಿ ಟ್ವೀಟ್ ಡಿಲೀಟ್ ಮಾಡಿರುವುದಾಗಿ ಹೇಳಿದ್ದಾರೆ. "ಮಗನ ಕಾರ್ accident ಚಿತ್ರ ನೋಡಿದರೆ ನನಗೆ ಹೃದಯದ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಿಗ್ಗೆಯಿಂದ ಏನು ತಿನ್ನಲಾಗದೆ ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿದೆ. ಮನೆಯವರು ಅದ ನೋಡದಂತೆ ವಿನಂತಿ ಮಾಡಿದರು. ಹಾಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ" ಎಂದು ಹೇಳಿದ್ದಾರೆ.
(Kannada Copy of Filmbeat Kannada)
ಜೀವನದಲ್ಲಿ ಸಂಸಾರದ ಸರ್ವಸದಸ್ಯರ ಭಾರಹೊತ್ತು, ತನಗಾಗಿ ಏನುಬಯಸದೆ!ತನ್ನವರಿಗಾಗಿ ಬಂದದ್ದೆಲ್ಲಾ ಸಹಿಸಿ ನೋವುನುಂಗಿ ಹೆಜ್ಜೆಹಾಕುವ ಮೌನಯೋಗಿ #ಅಪ್ಪ
— ನವರಸನಾಯಕ ಜಗ್ಗೇಶ್ (@Jaggesh2) July 1, 2021
ಇಂದು ಬಹಳ ನೆನಪಾದ ನನ್ನ #ಅಪ್ಪ ಅವನ ತ್ಯಾಗದಮುಂದೆ ಇಂದು ನಾನು ತೃಣ ಎನ್ನಿಸಿತು!
ಮಗನಿಗೆ ಬಹಳ ಒಳಏಟು ಬಿದ್ದಿದೆ,ಪಕ್ಕೆಮೂಳೆ ಬಲತೊಡೆ ligamentಗೆ ಬಲವಾದ ಪೆಟ್ಟು!ಚಿಕಿತ್ಸೆ ನಡೆಯುತ್ತಿದೆ🙏
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm