ಬ್ರೇಕಿಂಗ್ ನ್ಯೂಸ್
07-07-21 10:56 am Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಟ ಕೊನೆಯುಸಿರೆಳೆದರು.
ಇತ್ತೀಚಿಗೆ ದಿಲೀಪ್ ಕುಮಾರ್ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದರು. ''ದಿಲೀಪ್ ಕುಮಾರ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ಸ್ವಲ್ಪ ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಆರೈಕೆ ಮಾಡಲು ವೈದ್ಯರಿಗೂ ಸಹಾಯವಾಗಲಿದೆ. ಒಂದೆರಡು ದಿನದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ'' ಎಂದಿದ್ದರು.

ಆದರೀಗ ದಿಲೀಪ್ ಕುಮಾರ್ ಇನ್ನಿಲ್ಲ ಎನ್ನುವ ಸುದ್ದಿ ಶಾಕ್ ನೀಡಿದೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್ ಅನೇಕ ಮಂದಿ ಕಂಬನಿ ಮಿಡಿದಿದ್ದಾರೆ. ಜೂನ್ ತಿಂಗಳಲ್ಲಿ ದಿಲೀಪ್ ಕುಮಾರ್ 2ನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಭೀತಿಯ ಹಿನ್ನಲೆ ಪತ್ನಿ ಸಾಹೀರಾ ಬಾನು ಜೊತೆ ಕ್ವಾರಂಟೈನ್ ನಲ್ಲಿದ್ದ ದಿಲೀಪ್ ಕುಮಾರ್ ಅವರನ್ನು ವಯೋಸಹಜ ಕಾಯಿಲೆಗಳು ಆಗಾಗ ಕಾಡುತ್ತಿದ್ದು, ಹಾಗಾಗಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿತ್ತು.
'ಮುಘಲ್-ಎ-ಅಜಮ್', 'ರಾಮ್ ಔರ್ ಶ್ಯಾಮ್', 'ಕೋಹಿನೂರ್' ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿರುವ ದಿಲೀಪ್ ಕುಮಾರ್ 1998 ರಿಂದ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ದಿಲೀಪ್ ಕುಮಾರ್ ನಿಜವಾದ ಹೆಸರು ಮೊಹಮ್ಮದ್ ಯೂಸಫ್ ಖಾನ್.
(Kannada Copy of Filmbeat Kannada)
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm