ಬ್ರೇಕಿಂಗ್ ನ್ಯೂಸ್
10-07-21 04:04 pm Filmbeat : Bharath Kumar K ಸಿನಿಮಾ
ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ದಂಪತಿ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಶನಿವಾರ ಮಧ್ಯಾಹ್ನ ಗೀತಾ ಬಸ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹರ್ಭಜನ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ' ಎಂದು ತಿಳಿಸಿದ್ದಾರೆ.
ಎರಡನೇ ಬಾರಿ ತಂದೆಯಾದ ಸಂತಸವನ್ನು ಹಂಚಿಕೊಂಡಿರುವ ಹರ್ಭಜನ್, ''ಅದ್ಭುತ ಉಡುಗೊರೆ, ಇದು ಬಹಳ ವಿಶೇಷವಾದ ಕ್ಷಣ. ನಮ್ಮ ಜೀವನ ಸಂಪೂರ್ಣವಾಗಿದೆ, ನಾವು ಸಂತೋಷ ಸಾಗರದಲ್ಲಿ ಮುಳುಗಿದ್ದೇವೆ. ನಮ್ಮ ಕ್ಷೇಮ ಹಾಗು ಸಂತಸಕ್ಕಾಗಿ ಶುಭಕೋರಿದ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು'' ಎಂದು ಪೋಸ್ಟ್ ಮಾಡಿದ್ದಾರೆ.
ಹರ್ಭಜನ್ ಸಿಂಗ್ ಹಾಗೂ ನಟಿ ಗೀತಾ ಬಸ್ರಾ ಅವರ ವಿವಾಹ ಅಕ್ಟೋಬರ್ 29, 2015 ರಲ್ಲಿ ಪಂಜಾಬ್ನ ಜಲಂಧರ್ನಲ್ಲಿ ನಡೆದಿತ್ತು. ಅದಾಗಲೇ ಹರ್ಭಜನ್ ಸಿಂಗ್-ಗೀತಾ ದಂಪತಿಗೆ ಹೆಣ್ಣು ಮಗುವಿದೆ. 2016ರಲ್ಲಿ ಮೊದಲ ಮಗು ಜನಿಸಿತ್ತು.


ಅಂದ್ಹಾಗೆ, ಗೀತಾ ಬಸ್ರಾ ಅವರ ಕುಟುಂಬ ಯುಕೆಯಲ್ಲಿ ನೆಲೆಸಿದೆ. 2006 ರಲ್ಲಿ ಇಮ್ರಾನ್ ಹಶ್ಮಿ ಅಭಿನಯದ "ದಿಲ್ ದಿಯಾ ಹೈ" ಚಿತ್ರದ ಮೂಲಕ ಗೀತಾ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ್ದರು. ಈಗ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.
ಜಾನ್ ಪೌಲ್ ರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಫ್ರೆಂಡ್ಷಿಪ್ ಸಿನಿಮಾದಲ್ಲಿ ಹರ್ಭಜನ್ ಸಿಂಗ್ ನಟಿಸುತ್ತಿದ್ದಾರೆ. ಹರ್ಭಜನ್ ಜೊತೆ ಅರ್ಜುನ್ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮುಂಚೆ ಹಿಂದಿಯ ಆಲ್ಬಮ್ ಸಾಂಗ್ ಕೆಲವು ಸಿನಿಮಾದಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
(Kannada Copy of Filmbeat Kannada)
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm