ಬ್ರೇಕಿಂಗ್ ನ್ಯೂಸ್
16-07-21 01:11 pm Filmbeat : Shruthi K ಸಿನಿಮಾ
ರಾಷ್ಟ್ರಪ್ರಶಸ್ತಿ ಪುರಸ್ಕೃತ ಖ್ಯಾತ ನಟಿ ಸುರೇಖಾ ಸಿಕ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 75 ವರ್ಷದ ನಟಿ ಸುರೇಖಾ ಇಂದು (ಜುಲೈ 16) ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವರದಿಗಳ ಪ್ರಕಾರ ಸುರೇಖಾ 2018ರಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. 2020ರಲ್ಲಿ ಸುರೇಖಾಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ತೀವ್ರ ಅಸ್ವಸ್ಥರಾಗಿದ್ದರು ಎನ್ನಲಾಗುತ್ತಿದೆ.
3 ಬಾರಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿರುವ ನಟಿ ಸುರೇಖಾ ಸಿಕ್ರಿ ಅನಾರೋಗ್ಯದ ಬಗ್ಗೆ ಕುಟುಂಬದವರು ಬಹಿರಂಗ ಪಡಿಸಿರಲಿಲ್ಲ. ಇದೀಗ ನಿಧನದ ಬಳಿಕ ಮಾಹಿತಿ ಹಂಚಿಕೊಂಡಿರುವ ಸುರೇಖಾ ಮ್ಯಾನೇಜರ್, "ಮೂರು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೋದಿದರು. ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿದ್ದರು" ಎಂದು ಹೇಳಿದ್ದಾರೆ.


ನಟಿ ಸುರೇಖಾ ಸಿಕ್ರಿ 1978ರಲ್ಲಿ 'ಕಿಸ್ಸಾ ಕುರ್ಸಿ ಕಾ' ಚಿತ್ರದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಸುರೇಖಾ 1988ರಲ್ಲಿ ಬಂದ 'ತಮಾಸ್', 1995ರಲ್ಲಿ ಬಿಡುಗಡೆಯಾದ 'ಮಮ್ಮೊ' ಮತ್ತು 2018ರಲ್ಲಿ ಬಂದ 'ಬದೈ ಹೋ' ಸಿನಿಮಾಗಾಗಿ ಸುರೇಖಾ ಅತ್ಯುತ್ತಮ ಪೋಷಕ ನಟಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಸುರೇಖಾ ಖ್ಯಾತಿಗಳಿಸಿದ್ದರು.
'ಬಾಲಿಕಾ ವಧು' ಧಾರಾವಾಹಿ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ಇನ್ನು 'ಬದೈ ಹೋ' ಸಿನಿಮಾದ ಪಾತ್ರ ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. 2018ರಲ್ಲಿ ನಟಿ ಸುರೇಖಾ ಬ್ರೈನ್ ಸ್ಕ್ರೋಕ್ ನಿಂದ ಬಾತ್ ರೂಮ್ ನಲ್ಲಿ ಬಿದ್ದು ತೆಲೆಗೆ ತೀವ್ರವಾದ ಏಟು ಬಿದ್ದಿತ್ತು.
ಚೇತರಿಸಿಕೊಳ್ಳುತ್ತಿದ್ದ ಸುರೇಖಾ ಸಂದರ್ಶನದಲ್ಲಿ ಮಾತನಾಡಿ, "ನನಗೆ ಹತ್ತು ತಿಂಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅಂದಿನಿಂದ ಇವತ್ತಿನ ವರೆಗೂ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಅನಾರೋಗ್ಯದಿಂದ ನನಗೆ ಕೆಲಸ ಮಾಡಲು ನನಗೆ ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಸರಿಯಾಗುತ್ತೇನೆ ಎಂದು ವೈದ್ಯರು ಹೇಳಿದ್ದಾರೆ" ಎಂದಿದ್ದರು.
(Kannada Copy of Filmbeat Kannada)
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 08:53 pm
Mangalore Correspondent
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm