ಬ್ರೇಕಿಂಗ್ ನ್ಯೂಸ್
04-08-21 11:36 am Headline Karnataka News Network ಸಿನಿಮಾ
ನವದೆಹಲಿ, ಆಗಸ್ಟ್ 4: ಖ್ಯಾತ ರ್ಯಾಪ್ ಗಾಯಕ ಯೋ ಯೋ ಹನಿ ಸಿಂಗ್ ವಿರುದ್ದ ಗಂಭೀರ ಆರೋಪ ಕೇಳಿ ಬಂದಿದೆ. ಅವರ ಪತ್ನಿ ಶಾಲಿನ ತಲ್ವಾರ್ ತಮ್ಮ ಪತಿ ಕೌಟುಂಬಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ದೆಹಲಿಯ ತಿಸ್ ಹಜಾರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತಮ್ಮ ದೂರಿನಲ್ಲಿ ಹನಿ ಸಿಂಗ್ ನನಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 28 ರೊಳಗೆ ಉತ್ತರ ನೀಡುವಂತೆ ಕೋರ್ಟ್ ಹನಿ ಸಿಂಗ್ಗೆ ನೋಟಿಸ್ ನೀಡಿದೆ.
ಶಾಲಿನಿ ತಲ್ವಾರ್ ನೀಡಿರುವ ದೂರಿನಲ್ಲಿ ಹನಿ ಸಿಂಗ್ ವಿರುದ್ಧ ಸಾಕಷ್ಟು ಆರೋಪಗಳ ಪಟ್ಟಿಯೇ ಇದೆ. ನನ್ನ ಮೇಲೆ ಹನಿ ಸಿಂಗ್ ಹಲವಾರು ಬಾರಿ ದೈಹಿಕ ಹಲ್ಲೆ ಮಾಡಿದ್ದಾರೆ. ಮಾನಸಿಕ ಕಿರುಕುಳ ನೀಡಿದ್ದಾರೆ. ಹನಿ ಸಿಂಗ್ ಸಾಕಷ್ಟು ಹಣ ಸಂಪಾದಿಸಿದ್ದಾರೆ. ಹಾಡುಗಳು, ಶೋಗಳು, ರಾಯಲ್ಟಿ ರೂಪದಲ್ಲೇ ಅವರಿಗೆ ತಿಂಗಳಿಗೆ 4 ಕೋಟಿ ರೂ. ಸಂಪಾದನೆ ಆಗುತ್ತಿತ್ತು. ಆ ಸಮಯದಲ್ಲಿ ಅವರು ಡ್ರಗ್ಸ್, ಮದ್ಯಪಾನ, ಸಂವರ್ಧನ ಔಷಧಗಳಿಗೆ ದಾಸರಾಗಿದ್ದರು. ಹನಿ ಸಿಂಗ್ ದುರಾಹಂಕಾರಿ ಮತ್ತು ಕೆಟ್ಟದಾಗಿ ಬೈಯುತ್ತಿದ್ದರು. ಅನೇಕ ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಇಟ್ಟುಕೊಂಡಿದ್ದರು' ಎಂದು ತಿಳಿಸಿದ್ದಾರೆ.





ಆಗಸ್ಟ್ 3ರಂದು ದೂರು ದಾಖಲಾಗಿದ್ದು, ಸದ್ಯ ಹನಿ ಸಿಂಗ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮೂಲಗಳ ಪ್ರಕಾರ, ಶಾಲಿನಿ ಅವರ ಜಂಟಿ ಖಾತೆಗಳಿರುವ ಯಾವುದೇ ಆಸ್ತಿಯನ್ನು ಹನಿ ಸಿಂಗ್ ಮಾರಾಟ ಮಾಡದಂತೆ ನ್ಯಾಯಾಲಯವು ಆದೇಶ ನೀಡಿದೆ ಎಂಬ ಮಾಹಿತಿಯೂ ಸಿಕ್ಕಿದೆ.
38ರ ಹರೆಯದ ಹನಿ ಸಿಂಗ್, ಯೋ ಯೋ ಹನಿ ಸಿಂಗ್ ಅಂತಲೇ ಫೇಮಸ್. 2011ರಲ್ಲಿ ಶಾಲಿನಿ ತಲ್ವಾರ್ ಅವರನ್ನು ಹನಿ ಸಿಂಗ್ ಮದುವೆ ಆಗಿದ್ದರು. 2006ರಲ್ಲಿ ವೃತ್ತಿ ಜೀವನ ಆರಂಭಿಸಿದ ಹನಿ ಸಿಂಗ್, ಆರಂಭದ 10 ವರ್ಷ ಸಾಕಷ್ಟು ಖ್ಯಾತಿ ಪಡೆದುಕೊಂಡಿದ್ದರು. ಅವರ ಮ್ಯೂಸಿಕ್ ವಿಡಿಯೋ ಆಲ್ಭಂಗಳು ಸಖತ್ ಕ್ರೇಜ್ ಹುಟ್ಟುಹಾಕಿದ್ದವು. ತದನಂತರ ಅವರ ಖ್ಯಾತಿ ನಿಧಾನವಾಗಿ ಕಮ್ಮಿ ಆಗುತ್ತ ಹೋಯಿತು. ಆ ಸಂದರ್ಭದಲ್ಲಿ ಅವರು ಖಿನ್ನತೆಗೆ ಒಳಗಾಗಿದ್ದರು ಎಂಬ ಮಾತು ಕೇಳಿಬಂದಿತ್ತು. ಸದ್ಯ ಪತ್ನಿಯಿಂದ ದಾಖಲಾಗಿರುವ ಈ ದೂರಿಗೆ ಹನಿ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೋ ಕಾದು ನೋಡಬೇಕು.
The wife of singer Hirdesh Singh, who goes by the stage name Yo Yo Honey Singh, has approached a Delhi court alleging physical, mental and emotional abuse at the hands of her husband.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm