ಬ್ರೇಕಿಂಗ್ ನ್ಯೂಸ್
10-08-21 03:45 pm Filmbeat: Bharath Kumar K ಸಿನಿಮಾ
'ಲವ್ ಯೂ ರಚ್ಚು' ಚಿತ್ರೀಕರಣ ವೇಳೆ ನಡೆದ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿತ್ರದ ನಿರ್ದೇಶಕ ಶಂಕರ್, ಕ್ರೇನ್ ಆಪರೇಟರ್ ಮಹದೇವ್ ಹಾಗೂ ಫೈಟ್ ಮಾಸ್ಟರ್ ವಿನೋದ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ರಾಮನಗರ ಅಪರ ಹಿರಿಯ ಸಿವಿಲ್ ನ್ಯಾಯಾಧೀಶೇ ಅನುಪಮ ಲಕ್ಷ್ಮೀ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕೇಸ್ ಸಂಬಂಧ ಮುಂದಿನ ವಿಚಾರಣೆಯನ್ನು ಆಗಸ್ಟ್ 24 ರಂದು ನಡೆಸಲಾಗುವುದು ನ್ಯಾಯಾಲಯ ತಿಳಿಸಿದೆ.
ಸೋಮವಾರ (ಆಗಸ್ಟ್ 9) ಬಿಡದಿಯ ಜೋಗನಪಾಳ್ಯ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ 'ಲವ್ ಯೂ ರಚ್ಚು' ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೈ ಟೆನ್ಷನ್ ಕರೆಂಟ್ ವೈರ್ ತಗುಲಿ ಸಾಹಸ ಕಲಾವಿದ ವಿವೇಕ್ ಸಾವನ್ನಪ್ಪಿದ್ದರು. ರಂಜಿತ್ ಎನ್ನುವ ಸಹಾಯಕ ಕಲಾವಿದನಿಗೆ ಗಂಭೀರ ಗಾಯವಾಗಿದೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಬಿಡದಿ ಪೊಲೀಸರು ಸ್ಥಳಕ್ಕೆ ಧಾವಿಸಿ, ನಿರ್ದೇಶಕ ಶಂಕರ್, ಫೈಟ್ ಮಾಸ್ಟರ್ ವಿನೋದ್, ಕ್ರೇನ್ ಆಪರೇಟರ್ ಮಹಾದೇವ್ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಸೋಮವಾರ ತಡರಾತ್ರಿಯೇ ಬಂಧಿತರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಆದರೆ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನ್ಯಾಯಾಲಯಕ್ಕೆ ಕರೆ ತರುವಂತೆ ಜಡ್ಜ್ ಸೂಚನೆ ಕೊಟ್ಟಿದ್ದರು.
ಇನ್ನು ಈ ಕೇಸ್ ಸಂಬಂಧ ಶೂಟಿಂಗ್ ಮಾಡಲು ಅವಕಾಶ ಮಾಡಿಕೊಟ್ಟಿದ್ದ ಜಮೀನು ಮಾಲೀಕ ಪುಟ್ಟರಾಮು ಹಾಗೂ ಸಿನಿಮಾದ ನಿರ್ಮಾಪಕ ಗುರುದೇಶಪಾಂಡೆ ನಾಪತ್ತೆಯಾಗಿದ್ದಾರೆ. ಇವರಿಬ್ಬರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ. 'ಲವ್ ಯೂ ರಚ್ಚು' ಚಿತ್ರದ ನಾಯಕ ನಟ ಸಾಹಸ ಕಲಾವಿದ ವಿವೇಕ್ ಮೃತಪಟ್ಟ ವಿಚಾರ ತಿಳಿದು ಆಸ್ಪತ್ರೆ ಬಳಿ ಭೇಟಿ ನೀಡಿದ್ದರು. ಆದರೆ, ಆಸ್ಪತ್ರೆಯಲ್ಲಿ ಪಾರ್ಥಿವ ಶರೀರ ನೋಡಲು ಅವಕಾಶ ಕೊಟ್ಟಿಲ್ಲ. ಈ ಬಗ್ಗೆ ಸುದ್ದಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಜಯ್ ರಾವ್, ವಿವೇಕ್ ಕುಟುಂಬಕ್ಕೆ ನ್ಯಾಯ ಸಿಗುವ ರೀತಿಯಲ್ಲಿ ತೀರ್ಮಾನ ಮಾಡಬೇಕಿದೆ ಎಂದಿದ್ದಾರೆ. ''ವಿವೇಕ್ ಚಿಕ್ಕಪ್ಪನ ಜೊತೆ ಮಾತನಾಡಿದೆ, ನಿಮ್ಮ ಜೊತೆಯಲ್ಲಿ ನಾನಿದ್ದೇನೆ ಎಂದು ಹೇಳಿದ್ದೇನೆ. ನಿರ್ಮಾಪಕ ಗುರುದೇಶಪಾಂಡೆ ಅವರನ್ನು ಸಂಪರ್ಕಿಸಲು ಯತ್ನಿಸಿದೆ. ಅವರ ಸಂಪರ್ಕ ಸಾಧ್ಯವಾಗಿಲ್ಲ. ಈ ವಿಚಾರದಲ್ಲಿ ಅವರು ಮುಂದೆ ಬಂದು ಜವಾಬ್ದಾರಿ ತೆಗೆದುಕೊಂಡು ಸಾಂತ್ವನ ಹೇಳಬೇಕಿತ್ತು'' ಎಂದು ಅಜಯ್ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಜಯ್ ರಾವ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದ ರಂಜಿತ್
ಹೈಟೆನ್ಷನ್ ವೈರ್ ತಗುಲಿ ಗಾಯಗೊಂಡ ಸಹಾಯಕ ರಂಜಿತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನೆ ಬಗ್ಗೆ ಮಾತನಾಡಿರುವ ರಂಜಿತ್, ''ನಾನು ಏಳು ವರ್ಷದಿಂದ ಮಾಸ್ಟರ್ ಬಳಿ ಕೆಲಸ ಮಾಡ್ತಿದ್ದೇನೆ. ಅವರು ಈ ರೀತಿ ನಿರ್ಲಕ್ಷ್ಯ ಮಾಡುವ ವ್ಯಕ್ತಿಯಿಲ್ಲ. ಶೂಟಿಂಗ್ನಲ್ಲಿ ಎಲ್ಲ ಸ್ಟಂಟ್ ಚೆನ್ನಾಗಿ ಆಗ್ತಿತ್ತು. ಟೇಕ್ ಮಾಡೋದಕ್ಕೆ ರಿಹಾರ್ಸಲ್ ಮಾಡ್ತಿದ್ವಿ. ಪಕ್ಕದಲ್ಲೇ ಮಾಸ್ಟರ್ ಹೀರೋ ಅವರದ್ದು ಶೂಟ್ ಮಾಡ್ತಿದ್ರು. ಮೊದಲೇ ಆ ತೋಟದೊಳಗೆ ಕ್ರೇನ್ ಬರಲ್ಲ ಅಂತ ಹೇಳಿದ. ಆಮೇಲೆ ಹೇಗೋ ಒಳಗೆ ಬಂದ. ಮೊದಲು ಒಂದು ಸಲ ಮರ ಟಚ್ ಮಾಡಿದ. ಆಗಲೇ ನಾವು ಎಚ್ಚರಿಸಿದ್ವಿ. ಆದರೆ ಇನ್ನೊಂದು ಅಚಾನಕ್ ಆಗಿ ಹೈಟೆನ್ಷನ್ ವೈರ್ ಟಚ್ ಮಾಡಿದಾಗ ಹೀಗೆ ಆಯಿತು. ಇಲ್ಲಿ ಮಾಸ್ಟರ್ನ ಆರೋಪಿ ಮಾಡುವುದು ಸರಿಯಿಲ್ಲ'' ಎಂದು ಹೇಳಿದ್ದಾರೆ. ''ಇನ್ನು ಘಟನೆ ನಡೆದಾಗ ನಟ ಅಜಯ್ ರಾವ್ ದೂರದಲ್ಲಿದ್ದರು. ಸ್ವಲ್ಪ ಸಮಯದ ನಂತರ ಈ ವಿಷಯ ತಿಳಿಯಿತು ಎಂದು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ. ಅವರು ಹೇಳಿದಂತೆ ದೂರದಲ್ಲಿ ಎಲ್ಲೋ ಇರಲಿಲ್ಲ. ನಾವು ವೈರ್ ಟಚ್ ಆಗಿ ಕೆಳಗೆ ಬಿದ್ದೆವು. ಕೂಡಲೇ ನಮ್ಮ ಫೈಟರ್ಸ್ ಓಡಿ ಬಂದು ಏನಾಯ್ತು ಎಂದು ನೋಡಿದರು. ಆಗ ನಮ್ಮ ಕಣ್ಣೆದುರಲ್ಲೇ ಅಜಯ್ ರಾವ್ ಟೆಂಟ್ನಲ್ಲಿ ಕುಳಿತಿದ್ದರು. ನಮ್ಮ ಹತ್ತಿರ ಸಹ ಅವರು ಬರಲಿಲ್ಲ'' ಎಂದು ರಂಜಿತ್ ಅಸಮಾಧಾನ ವ್ಯಕ್ತಪಡಿಸಿದ್ದರು.
(Kannada Copy of Filmbeat Kannada)
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm