ಬ್ರೇಕಿಂಗ್ ನ್ಯೂಸ್
30-08-21 03:13 pm Filmbeat: Manjunatha C ಸಿನಿಮಾ
ಗೋವಿಂದಪುರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಹಲವು ಸೆಲೆಬ್ರಿಟಿಗಳ ಮನೆ ಮೇಲೆ ಸೋಮವಾರ (ಆಗಸ್ಟ್ 30) ಪೊಲೀಸರು ದಾಳಿ ನಡೆಸಿದ್ದಾರೆ. ನಟಿ-ಮಾಡೆಲ್ ಸೋನಿಯಾ ಅಗರ್ವಾಲ್ ನಿವಾಸದ ಮೇಲೆಯೂ ದಾಳಿ ಆಗಿದೆ ಎಂದು ವರದಿಯಾಗಿತ್ತು.
ಸೋನಿಯಾ ಮನೆ ಪರಿಶೀಲನೆ ವೇಳೆ ಗಾಂಜಾ ಪತ್ತೆಯಾಗಿದ್ದು, ನಟಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಈ ಸೋಮವಾರ ಬೆಳ್ಳಂಬೆಳಗ್ಗೆ ಉದ್ಯಮಿ ಹಾಗೂ ಸೆಲೆಬ್ರಿಟಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಪರಿಶೀಲನೆ ಬಳಿಕ ಉದ್ಯಮಿ ಭರತ್, ಡಿಜೆ ವಚನ್ ಚಿನ್ನಪ್ಪ ಹಾಗೂ ನಟಿ-ಮಾಡೆಲ್ ಸೋನಿಯಾ ಅವರನ್ನು ಡಿಜೆ ಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಳಗ್ಗೆ ಸೋನಿಯಾ ಮನೆಯ ಪೊಲೀಸರು ಭೇಟಿ ನೀಡಿದ ಸಂದರ್ಭದಲ್ಲಿ ನಟಿ ಮನೆಯಲ್ಲಿ ಇರಲಿಲ್ಲ. ಅವರ ತಂದೆಯಿಂದ ಮನೆ ಕೀ ತೆಗೆಸಿ ಪರಿಶೀಲನೆ ನಡೆಸಿದರು. ನಂತರ ಈ ವಿಷಯ ತಿಳಿದ ಸೋನಿಯಾ ತಂದೆಗೆ ಫೋನ್ ಮಾಡಿ 12 ಗಂಟೆಗೆ ಮನೆಗೆ ಬರುವೆ ಎಂದು ಹೇಳಿದ್ದರು. ಆದರೆ, ಆ ಸಮಯಕ್ಕೆ ಬರಲಿಲ್ಲ. ನಂತರ ಆಕೆ ಖಾಸಗಿ ಹೋಟೆಲ್ನಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಹೋಟೆಲ್ಗೆ ತೆರಳಿ ಬಂಧಿಸಿದ್ದಾರೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಈ ಹಿಂದೆ ಡ್ರಗ್ಸ್ ಪೆಡ್ಲರ್ ಥಾಮಸ್ ಎಂಬ ನೈಜೀರಿಯ ಪ್ರಜೆಯನ್ನು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಕೆಲವು ಉದ್ಯಮಿಗಳಿಗೆ ಹಾಗೂ ಸೆಲೆಬ್ರಿಟಿಗಳಿಗೆ ನೇರವಾಗಿ ಡ್ರಗ್ಸ ಸರಬರಾಜು ಮಾಡ್ತಿದ್ದೆ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾನೆ. ಥಾಮಸ್ ಹೇಳಿಕೆ ಹಿನ್ನೆಲೆ ಸೋನಿಯಾ, ಭರತ್, ವಚನ್ ಚಿನ್ನಪ್ಪ ಮನೆ ಮೇಲೆ ದಾಳಿ ನಡೆಸಲಾಗಿದೆ.
ಸ್ಯಾಂಡಲ್ವುಡ್ ಬೆನ್ನು ಬಿಡದ ಡ್ರಗ್ಸ್ ಕೇಸ್ ಡ್ರಗ್ಸ್ ಕೇಸ್ ಚಿತ್ರರಂಗವನ್ನು ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಟಾಲಿವುಡ್, ಬಾಲಿವುಡ್ ಜೊತೆಗೆ ಸ್ಯಾಂಡಲ್ವುಡ್ನಲ್ಲೀ ಡ್ರಗ್ಸ್ ಆಧರಿತ ಕೇಸ್ಗಳು ದಾಖಲಾಗಿದೆ. ಕಳೆದ ವರ್ಷ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಹಾಗೂ ರಾಗಿಣಿ ಸೇರಿದಂತೆ ಅವರ ಆಪ್ತರು ಅರೆಸ್ಟ್ ಆಗಿದ್ದರು. ತಿಂಗಳುಗಳ ಕಾಲ ಜೈಲಿನಲ್ಲಿದ್ದರು. ಆಮೇಲೆ ಜಾಮೀನು ಪಡೆದ ಹೊರಬಂದಿದ್ದರು. ರಾಗಿಣಿ ಮತ್ತು ಸಂಜನಾ ಮಾತ್ರವಲ್ಲದೇ ಹಲವು ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು ಬೆಂಗಳೂರು ಸಿಸಿಬಿ ಪೊಲೀಸರು.
ಆ ಕಡೆ ಬಾಲಿವುಡ್ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಡ್ರಗ್ಸ್ ಪ್ರಕರಣ ಬೆಳಕಿಗೆ ಬಂತು. ಅದಾದ ಬಳಿಕ ಸ್ಟಾರ್ ನಟ-ನಟಿಯರನ್ನು ಮುಂಬೈ ಪೊಲೀಸರು ವಿಚಾರಣೆ ಮಾಡಿದ್ದರು. ರಕುಲ್ ಪ್ರೀತ್ ಸಿಂಗ್, ಸಾರಾ ಅಲಿ ಖಾನ್, ದೀಪಿಕಾ ಪಡುಕೋಣೆ, ಅರ್ಜುನ್ ರಾಂಪಾಲ್ ಸೇರಿದಂತೆ ಹಲವು ತಾರೆಯರ ಹೆಸರು ತಳುಕು ಹಾಕಿಕೊಂಡಿತ್ತು.
ನಾಲ್ಕು ವರ್ಷದ ಹಿಂದಿನ ಟಾಲಿವುಡ್ ಪ್ರಕರಣ ನಾಲ್ಕು ವರ್ಷದ ಹಿಂದಿನ ಡ್ರಗ್ಸ್ ಪ್ರಕರಣ ಟಾಲಿವುಡ್ನಲ್ಲಿ ಮತ್ತೆ ಜೀವ ಪಡೆದುಕೊಂಡಿದೆ. ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ತೆಲುಗಿನ ಸ್ಟಾರ್ ಕಲಾವಿದರಿಗೆ ಜಾರಿ ನಿರ್ದೇಶನಾಲಯ (ED-Enforcement Directorate) ಸಮನ್ಸ್ ಜಾರಿ ಮಾಡಿದೆ. ತೆಲುಗಿನ ಖ್ಯಾತನಾಮರಾದ ರಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ಪೂರಿ ಜಗನ್ನಾಥ್, ರವಿತೇಜ, ಚಾರ್ಮಿ ಕೌರ್, ಮುಮೈತ್ ಖಾನ್ ಸೇರಿದಂತೆ ಒಟ್ಟು 12 ಜನರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಬುಧವಾರ (ಆಗಸ್ಟ್ 25) ಸಮನ್ಸ್ ಜಾರಿ ಮಾಡಿದೆ.
ಡ್ರಗ್ಸ್ ಪ್ರಕರಣದಲ್ಲಿ 2017ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ (ಎಸ್ಐಟಿ) ಟಾಲಿವುಡ್ನ 12 ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಲಾಖೆಯೂ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿಕೊಂಡಿತ್ತು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm