ಬ್ರೇಕಿಂಗ್ ನ್ಯೂಸ್
01-09-21 03:24 pm Filmbeat Kannada ಸಿನಿಮಾ
ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮುಂಬೈನ ಹಿಂದುಜಾ ಆಸ್ಪತ್ರೆಗೆ ಸೈರಾ ಬಾನು ಅವರನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸೈರಾ ಬಾನು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಕಳೆದ 3 ದಿನಗಳ ಹಿಂದೆಯೇ ಸೈರಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು (ಸೆಪ್ಟಂಬರ್ 1) ಐ ಸಿ ಯುಗೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗಷ್ಟೆ ಸೈರಾ ಬಾನು ಪ್ರೀತಿಯ ಪತಿ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಲ್ಲಿದ್ದ ಸೈರಾ ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಸ್ನೇಹಿತರಲ್ಲಿ ಆತಂಕ ಮನೆ ಮಾಡಿದೆ. ಸೈರಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಅವರ ಕುಟುಂಬದವರಾಗಲಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

ನಟ ದಿಲೀಪ್ ಕುಮಾರ್ ವಯೋಸಹಜ ಕಾಯಿಲೆಯಿಂದ ಜುಲೈ 7ರಂದು ನಿಧನ ಹೊಂದಿದರು. 98 ವರ್ಷದ ನಟ ದಿಲೀಪ್ ಅನಾರೋಗ್ಯದ ಕಾರಣ ಆಗಾಗ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 7ರಂದು ಕೊನೆಯುಸಿರೆಳೆದರು. ಸೈರಾ ಬಾನು ಮತ್ತು ದಿಲೀಪ್ ಇಬ್ಬರದ್ದು ಪ್ರೇಮ ವಿವಾಹ. ಇಬ್ಬರೂ ಮದುವೆಯಾಗಿ 54 ವರ್ಷಗಳು ಕಳೆದಿವೆ. ಇಬ್ಬರ ಪ್ರೇಮ ಕಥೆ ಬಾಲಿವುಡ್ ನಲ್ಲಿ ಮರೆಯಲಾಗದ ಪ್ರೇಮಕಥೆಯಾಗಿದೆ.
ಕೊನೆಯದಾಗಿ ಸೈರಾ ಬಾನು ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪತಿ ಆರೋಗ್ಯದ ಬಗ್ಗೆ ಮಾತನಾಡಿದ್ದರು. ದಿಲೀಪ್ ಕುಮಾರ್ ಆರೋಗ್ಯ ತೀರ ಹದಗೆಟ್ಟಿದೆ ಎಂದು ಹೇಳಿದ್ದರು. "ಅವರ ಆರೋಗ್ಯ ತುಂಬಾ ಹದಗೆಟ್ಟಿದೆ. ತುಂಬಾ ದುರ್ಬಲ ಆಗಿದ್ದಾರೆ. ಮನೆಯೊಳಗೆ ಮಾತ್ರ ಓಡಾಡುತ್ತಾರೆ. ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ" ಎಂದು ಹೇಳಿದ್ದರು. ಜೊತೆಗೆ ಪತಿಯನ್ನು ಹಾಡಿ ಹೊಗಳಿದ್ದರು. ಇದೀಗ ಸ್ವತಃ ಸೈರಾ ಅವರೇ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈರಾ ಬೇಗ ಗುಣಮುಖರಾಗಲಿ ಎಂದು ಸ್ನೇಹಿತರು, ಚಿತ್ರರಂಗದ ಗಣ್ಯರು ಹಾರೈಸುತ್ತಿದ್ದಾರೆ.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm