ಬ್ರೇಕಿಂಗ್ ನ್ಯೂಸ್
01-09-21 03:24 pm Filmbeat Kannada ಸಿನಿಮಾ
ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮುಂಬೈನ ಹಿಂದುಜಾ ಆಸ್ಪತ್ರೆಗೆ ಸೈರಾ ಬಾನು ಅವರನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸೈರಾ ಬಾನು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಕಳೆದ 3 ದಿನಗಳ ಹಿಂದೆಯೇ ಸೈರಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು (ಸೆಪ್ಟಂಬರ್ 1) ಐ ಸಿ ಯುಗೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗಷ್ಟೆ ಸೈರಾ ಬಾನು ಪ್ರೀತಿಯ ಪತಿ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಲ್ಲಿದ್ದ ಸೈರಾ ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಸ್ನೇಹಿತರಲ್ಲಿ ಆತಂಕ ಮನೆ ಮಾಡಿದೆ. ಸೈರಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಅವರ ಕುಟುಂಬದವರಾಗಲಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

ನಟ ದಿಲೀಪ್ ಕುಮಾರ್ ವಯೋಸಹಜ ಕಾಯಿಲೆಯಿಂದ ಜುಲೈ 7ರಂದು ನಿಧನ ಹೊಂದಿದರು. 98 ವರ್ಷದ ನಟ ದಿಲೀಪ್ ಅನಾರೋಗ್ಯದ ಕಾರಣ ಆಗಾಗ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 7ರಂದು ಕೊನೆಯುಸಿರೆಳೆದರು. ಸೈರಾ ಬಾನು ಮತ್ತು ದಿಲೀಪ್ ಇಬ್ಬರದ್ದು ಪ್ರೇಮ ವಿವಾಹ. ಇಬ್ಬರೂ ಮದುವೆಯಾಗಿ 54 ವರ್ಷಗಳು ಕಳೆದಿವೆ. ಇಬ್ಬರ ಪ್ರೇಮ ಕಥೆ ಬಾಲಿವುಡ್ ನಲ್ಲಿ ಮರೆಯಲಾಗದ ಪ್ರೇಮಕಥೆಯಾಗಿದೆ.
ಕೊನೆಯದಾಗಿ ಸೈರಾ ಬಾನು ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪತಿ ಆರೋಗ್ಯದ ಬಗ್ಗೆ ಮಾತನಾಡಿದ್ದರು. ದಿಲೀಪ್ ಕುಮಾರ್ ಆರೋಗ್ಯ ತೀರ ಹದಗೆಟ್ಟಿದೆ ಎಂದು ಹೇಳಿದ್ದರು. "ಅವರ ಆರೋಗ್ಯ ತುಂಬಾ ಹದಗೆಟ್ಟಿದೆ. ತುಂಬಾ ದುರ್ಬಲ ಆಗಿದ್ದಾರೆ. ಮನೆಯೊಳಗೆ ಮಾತ್ರ ಓಡಾಡುತ್ತಾರೆ. ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ" ಎಂದು ಹೇಳಿದ್ದರು. ಜೊತೆಗೆ ಪತಿಯನ್ನು ಹಾಡಿ ಹೊಗಳಿದ್ದರು. ಇದೀಗ ಸ್ವತಃ ಸೈರಾ ಅವರೇ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈರಾ ಬೇಗ ಗುಣಮುಖರಾಗಲಿ ಎಂದು ಸ್ನೇಹಿತರು, ಚಿತ್ರರಂಗದ ಗಣ್ಯರು ಹಾರೈಸುತ್ತಿದ್ದಾರೆ.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm