ಬ್ರೇಕಿಂಗ್ ನ್ಯೂಸ್
08-09-21 12:50 pm Filmbeat: Manjunatha C ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಟ್ವೀಟ್ರ್ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಕ್ಷಯ್ ಕುಮಾರ್, ''ಆಕೆ ನನ್ನ ಬೇರಾಗಿದ್ದಳು. ನಾನು ಇಂದು ತಡೆದುಕೊಳ್ಳಲಾಗದಷ್ಟು ದುಃಖದಲ್ಲಿದ್ದೇನೆ. ನನ್ನ ತಾಯಿ ಶ್ರೀಮತಿ ಅರುಭಾ ಭಾಟಿಯಾ ಇಂದು ಮುಂಜಾನೆ ಶಾಂತವಾಗಿ ಈ ಲೋಕವನ್ನು ಬಿಟ್ಟು ಹೋಗಿದ್ದಾಳೆ. ಆಕೆ ಬೇರೆ ಲೋಕದಲ್ಲಿ ನನ್ನ ತಂದೆಯನ್ನು ಸೇರಿಕೊಂಡಿದ್ದಾಳೆ. ಕಠಿಣ ಸಮಯದಲ್ಲಿ ನನ್ನ ಕುಟುಂಬದ ಪರವಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ, ಓಂ ಶಾಂತಿ'' ಎಂದಿದ್ದಾರೆ.

ಮಂಗಳವಾರ ಟ್ವೀಟ್ ಮಾಡಿದ್ದ ಅಕ್ಷಯ್ ಕುಮಾರ್, ''ನನ್ನ ತಾಯಿಯ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ನೋಡಿ ಮನಸ್ಸು ತುಂಬಿ ಬಂದಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಇದು ಬಹಳ ಕಠಿಣ ಸಮಯ. ನಿಮ್ಮ ಪ್ರತಿಯೊಬ್ಬರ ಪ್ರಾರ್ಥನೆ ನಮಗೆ ಸಹಕಾರಿ ಆಗಲಿದೆ'' ಎಂದಿದ್ದರು. ಆದರೆ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ, ಅಕ್ಷಯ್ ತಾಯಿ ಇಂದು ಬೆಳಿಗ್ಗೆ ಅಸುನೀಗಿದ್ದಾರೆ.
ಸೆಪ್ಟೆಂಬರ್ 5 ರಂದೇ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮುಂಬೈನ ಹೀರಾನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿಯ ಆರೋಗ್ಯ ಕ್ಷೀಣಿಸಿದ ವಿಷಯ ತಿಳಿದ ಕೂಡಲೇ ಬ್ರಿಟನ್ನಲ್ಲಿನ ಚಿತ್ರೀಕರಣ ಅರ್ಧಕ್ಕೆ ಕೈಬಿಟ್ಟು ಸೆಪ್ಟೆಂಬರ್ 6ರಂದು ಭಾರತಕ್ಕೆ ವಾಪಸ್ಸಾಗಿದ್ದರು ಅಕ್ಷಯ್. ಬ್ರಿಟನ್ನಲ್ಲಿ 'ಸಿಂಡ್ರೆಲಾ' ಸಿನಿಮಾದ ಶೂಟಿಂಗ್ನಲ್ಲಿ ಅಕ್ಷಯ್ ಕುಮಾರ್ ತೊಡಿಗಿಸಿಕೊಂಡಿದ್ದರು. ಅಕ್ಷಯ್ ಕುಮಾರ್ ತಂದೆ ಹರಿ ಓಮ್ ಭಾಟಿಯಾ ಸೈನ್ಯಾಧಿಕಾರಿ ಆಗಿದ್ದರು, ತಾಯಿ ಅರುಣಾ ಭಾಟಿಯಾ ಗೃಹಿಣಿ ಆಗಿದ್ದರು. ನಂತರ ನಿರ್ಮಾಪಕಿಯಾಗಿಯೂ ಬದಲಾದರು. ಹರಿ ಓಂ ಪ್ರೊಡಕ್ಷನ್ ಹೌಸ್ನ ಪಾಲುದಾರೆ ಆಗಿದ್ದ ಅವರು, ಪ್ರೊಡಕ್ಷನ್ ಹೌಸ್ ಮೂಲಕ 'ಸಿಂಗ್ ಈಸ್ ಕಿಂಗ್', 'ಓಹ್ ಮೈ ಗಾಡ್', 'ಹಾಲಿಡೇ', 'ಏರ್ಲಿಫ್ಟ್', 'ರುಸ್ತುಂ', 'ನಾಮ್ ಶಬಾನಾ', 'ಟಾಯ್ಲೆಟ್', 'ಚುಂಬಕ್' ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
She was my core. And today I feel an unbearable pain at the very core of my existence. My maa Smt Aruna Bhatia peacefully left this world today morning and got reunited with my dad in the other world. I respect your prayers as I and my family go through this period. Om Shanti 🙏🏻
— Akshay Kumar (@akshaykumar) September 8, 2021
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm