ಬ್ರೇಕಿಂಗ್ ನ್ಯೂಸ್
08-09-21 12:50 pm Filmbeat: Manjunatha C ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಟ್ವೀಟ್ರ್ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಕ್ಷಯ್ ಕುಮಾರ್, ''ಆಕೆ ನನ್ನ ಬೇರಾಗಿದ್ದಳು. ನಾನು ಇಂದು ತಡೆದುಕೊಳ್ಳಲಾಗದಷ್ಟು ದುಃಖದಲ್ಲಿದ್ದೇನೆ. ನನ್ನ ತಾಯಿ ಶ್ರೀಮತಿ ಅರುಭಾ ಭಾಟಿಯಾ ಇಂದು ಮುಂಜಾನೆ ಶಾಂತವಾಗಿ ಈ ಲೋಕವನ್ನು ಬಿಟ್ಟು ಹೋಗಿದ್ದಾಳೆ. ಆಕೆ ಬೇರೆ ಲೋಕದಲ್ಲಿ ನನ್ನ ತಂದೆಯನ್ನು ಸೇರಿಕೊಂಡಿದ್ದಾಳೆ. ಕಠಿಣ ಸಮಯದಲ್ಲಿ ನನ್ನ ಕುಟುಂಬದ ಪರವಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ, ಓಂ ಶಾಂತಿ'' ಎಂದಿದ್ದಾರೆ.
ಮಂಗಳವಾರ ಟ್ವೀಟ್ ಮಾಡಿದ್ದ ಅಕ್ಷಯ್ ಕುಮಾರ್, ''ನನ್ನ ತಾಯಿಯ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ನೋಡಿ ಮನಸ್ಸು ತುಂಬಿ ಬಂದಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಇದು ಬಹಳ ಕಠಿಣ ಸಮಯ. ನಿಮ್ಮ ಪ್ರತಿಯೊಬ್ಬರ ಪ್ರಾರ್ಥನೆ ನಮಗೆ ಸಹಕಾರಿ ಆಗಲಿದೆ'' ಎಂದಿದ್ದರು. ಆದರೆ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ, ಅಕ್ಷಯ್ ತಾಯಿ ಇಂದು ಬೆಳಿಗ್ಗೆ ಅಸುನೀಗಿದ್ದಾರೆ.
ಸೆಪ್ಟೆಂಬರ್ 5 ರಂದೇ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮುಂಬೈನ ಹೀರಾನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿಯ ಆರೋಗ್ಯ ಕ್ಷೀಣಿಸಿದ ವಿಷಯ ತಿಳಿದ ಕೂಡಲೇ ಬ್ರಿಟನ್ನಲ್ಲಿನ ಚಿತ್ರೀಕರಣ ಅರ್ಧಕ್ಕೆ ಕೈಬಿಟ್ಟು ಸೆಪ್ಟೆಂಬರ್ 6ರಂದು ಭಾರತಕ್ಕೆ ವಾಪಸ್ಸಾಗಿದ್ದರು ಅಕ್ಷಯ್. ಬ್ರಿಟನ್ನಲ್ಲಿ 'ಸಿಂಡ್ರೆಲಾ' ಸಿನಿಮಾದ ಶೂಟಿಂಗ್ನಲ್ಲಿ ಅಕ್ಷಯ್ ಕುಮಾರ್ ತೊಡಿಗಿಸಿಕೊಂಡಿದ್ದರು. ಅಕ್ಷಯ್ ಕುಮಾರ್ ತಂದೆ ಹರಿ ಓಮ್ ಭಾಟಿಯಾ ಸೈನ್ಯಾಧಿಕಾರಿ ಆಗಿದ್ದರು, ತಾಯಿ ಅರುಣಾ ಭಾಟಿಯಾ ಗೃಹಿಣಿ ಆಗಿದ್ದರು. ನಂತರ ನಿರ್ಮಾಪಕಿಯಾಗಿಯೂ ಬದಲಾದರು. ಹರಿ ಓಂ ಪ್ರೊಡಕ್ಷನ್ ಹೌಸ್ನ ಪಾಲುದಾರೆ ಆಗಿದ್ದ ಅವರು, ಪ್ರೊಡಕ್ಷನ್ ಹೌಸ್ ಮೂಲಕ 'ಸಿಂಗ್ ಈಸ್ ಕಿಂಗ್', 'ಓಹ್ ಮೈ ಗಾಡ್', 'ಹಾಲಿಡೇ', 'ಏರ್ಲಿಫ್ಟ್', 'ರುಸ್ತುಂ', 'ನಾಮ್ ಶಬಾನಾ', 'ಟಾಯ್ಲೆಟ್', 'ಚುಂಬಕ್' ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
She was my core. And today I feel an unbearable pain at the very core of my existence. My maa Smt Aruna Bhatia peacefully left this world today morning and got reunited with my dad in the other world. I respect your prayers as I and my family go through this period. Om Shanti 🙏🏻
— Akshay Kumar (@akshaykumar) September 8, 2021
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am