ಬ್ರೇಕಿಂಗ್ ನ್ಯೂಸ್
08-09-21 03:35 pm Filmbeat Kannada ಸಿನಿಮಾ
ಸ್ಯಾಂಡಲ್ವುಡ್ನ ಖ್ಯಾತ ಕಾಮಿಡಿ ಸ್ಟಾರ್ ದಿವಂಗತ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೆಬ್ಬಾಳ ಬಳಿ ನಡೆದಿದೆ. ನಿನ್ನೆ ರಾತ್ರಿ (ಸೆಪ್ಟಂಬರ್ 7) ಈ ಘಟನೆ ನಡೆದಿದ್ದು, ಕೆಲವು ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಬಂದಿದೆ. ರಾತ್ರಿ 9 ಗಂಟೆಗೆ ಜಿಮ್ ಮುಗಿಸಿ ರಕ್ಷಕ್ ಮನೆಗೆ ವಾಪಸಾಗುತ್ತಿದ್ದಾಗ, ಅವರ ಬ್ಯಾಗ್ ಅನ್ನು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್ನಿಂದ ಕೆಳಗೆ ಬಿದ್ದ ರಕ್ಷಕ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ತಿಳಿದುಬಂದಿದೆ.
ತಕ್ಷಣ ಬೈಕ್ ಸ್ಥಳದಲ್ಲಿಯೇ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಬೈಕ್ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಹೆಬ್ಬಾಳ ಫ್ಲೈ ಓವರ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್ನಿಂದ ಕೆಳಗೆ ಬಿದ್ದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ಗಾಡಿಯೂ ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಂಗಳ ಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ಫ್ಲೈ ಓವರ್ ಮೇಲೆ ಗಾಡಿ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾತ್ರಿ ಪ್ರಯಾಣಿಕರು ಭಯಪಡುವಂತಾಗಿದೆ. ಇನ್ನು ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಚಿತ್ರರಂಗಕ್ಕೆ ಎಂಟ್ರಿ ಕೊಡುವ ತಯಾರಿಯಲ್ಲಿದ್ದಾರೆ. ತಂದೆಯ ನಿಧನದ ಬಳಿಕ ರಕ್ಷಕ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಈಗಾಗಲೇ ರಕ್ಷಕ್ ನಟನೆಯ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ಗುರುಶಿಷ್ಯರು ಎನ್ನುವ ಟೈಟಲ್ನಲ್ಲಿ ನಟ ಶರಣ್ ಮತ್ತು ತಂಡದವರು ಹೊಸ ಸಿನಿಮಾ ಮಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಜಡೇಶ್ ಗುರುಶಿಷ್ಯರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಶರಣ್ ಶಿಷ್ಯನ ಪಾತ್ರದಲ್ಲಿ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ವಿಶೇಷ ಎಂದರೆ ನೆನಪಿರಲಿ ಪ್ರೇಮ್ ಪುತ್ರ ಏಕಾಂತ್ ಕೂಡ ಗುರುಶಿಷ್ಯರು ಸಿನಿಮಾಗಾಗಿ ಬಣ್ಣ ಹಚ್ಚಿದ್ದಾರೆ. ಇದಲ್ಲದೆ ಬಹಳಷ್ಟು ಕಲಾವಿದರು ಮಕ್ಕಳು ಗುರುಶಿಷ್ಯರು ಸಿನಿಮಾದಲ್ಲಿ ನಟಿಸಿದ್ದಾರೆ ಅನ್ನೊ ಮಾಹಿತಿ ಇದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm