ಬ್ರೇಕಿಂಗ್ ನ್ಯೂಸ್
09-09-21 10:48 am Filmbeat: Manjunatha C ಸಿನಿಮಾ
ಬಾಲಿವುಡ್ ಸಿನಿಮಾದಲ್ಲೂ ನಟಿಸಿರುವ ಪಾಕಿಸ್ತಾನದ ನಟಿ ಸಬಾ ಖಮರ್ ಹಾಗೂ ಗಾಯಕ ಬಿಲಾಲ್ ಸೈಯದ್ ವಿರುದ್ಧ ಪಾಕಿಸ್ತಾನದ ಸ್ಥಳೀಯ ನ್ಯಾಯಾಲಯವೊಂದು ಬಂಧನದ ವಾರೆಂಟ್ ಹೊರಡಿಸಿದೆ.
ಬಾಲಿವುಡ್ನ 'ಹಿಂದಿ ಮೀಡಿಯಮ್' ಸಿನಿಮಾದಲ್ಲಿ ನಟಿಸಿರುವ ಸಬಾ ಖಮರ್ ಪಾಕಿಸ್ತಾನದ ಐತಿಹಾಸಿಕ ಮಸೀದಿಯೊಂದರ ಮುಂದೆ ಡ್ಯಾನ್ಸ್ ಮಾಡಿ ಅದರ ವಿಡಿಯೋ ಚಿತ್ರೀಕರಣ ಮಾಡಿದ್ದರು. ಹಾಗಾಗಿ ಅವರ ವಿರುದ್ದ ದೂರು ದಾಖಲಾಗಿತ್ತು.
ಲಾಹೋರ್ನ ಐತಿಹಾಸಿಕ ಮಸೀದಿಯ ಡ್ಯಾನ್ಸ್ ಮಾಡುವ ಮೂಲಕ ಮಸೀದಿಯನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಸಬಾ ಖಮರ್ ಹಾಗೂ ಬಿಬಾಲ್ ವಿರುದ್ಧ ದೂರು ದಾಖಲಿಸಲಾಗಿತ್ತು. ಪಾಕಿಸ್ತಾನ ಪಿನಲ್ ಕೋಡ್ 256 ರ ಅಡಿ ಇಬ್ಬರು ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಾಲಯದಲ್ಲಿ ಹಲವು ದಿನದಿಂದ ಈ ಕುರಿತು ವಿಚಾರಣೆ ಚಾಲ್ತಿಯಲ್ಲಿತ್ತು ಆದರೆ ಹಲವು ಸಮನ್ಸ್ ನೀಡಿದ್ದರೂ ಸದಾ ಖಮರ್ ಹಾಗೂ ಬಿಲಾಲ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲವಾದ್ದರಿಂದ ಇಬ್ಬರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಡ್ಯಾನ್ಸ್ ವಿಡಿಯೋಕ್ಕೆ ಅನುಮತಿ ನೀಡಿದ ಇಬ್ಬರು ಅಧಿಕಾರಿಗಳನ್ನು ಸಹ ಅಮಾನತು ಮಾಡಲಾಗಿದೆ.
ಸಬಾ ಖಮರ್ರ ಡ್ಯಾನ್ಸ್ ವಿಡಿಯೋ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು, ಸಬಾ ಖಮರ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ನಿಂದನೆ, ಕೊಲೆ ಬೆದರಿಕೆಗಳು ಬಂದಿವೆ. ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಇಬ್ಬರೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣ ಮೂಲಕ ಕ್ಷಮೆ ಕೇಳಿದ್ದಾರೆ. ''ಮ್ಯೂಸಿಕ್ ವಿಡಿಯೋನಲ್ಲಿ ಮದುವೆಯ ದೃಶ್ಯ ಇತ್ತು. ಅದನ್ನು ಮಸೀದಿಯ ಮುಂದೆ ಚಿತ್ರೀಕರಣ ಮಾಡಿದ್ದೇವೆ. ಅದಕ್ಕೆ ಯಾವುದೇ ಹಿನ್ನೆಲೆ ಸಂಗೀತವನ್ನು ಸಹ ನಾವು ನೀಡಿಲ್ಲ. ನಮ್ಮ ವಿಡಿಯೋದಿಂದ ಯಾರದ್ದಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಇರಲಿ'' ಎಂದಿದ್ದಾರೆ.
ಬಾಲಿವುಡ್ನ 'ಹಿಂದಿ ಮೀಡಿಯಮ್' ಸಿನಿಮಾದಲ್ಲಿ ಸಬಾ ಖಮರ್ ನಟಿಸಿದ್ದರು. ಈ ಸಿನಿಮಾದಲ್ಲಿ ಇರ್ಫಾನ್ ಖಾನ್ ನಾಯಕನಾಗಿ ನಟಿಸಿದ್ದರು. ಪಾಕಿಸ್ತಾನದ ಸಾಮಾಜಿಕ ಜಾಲತಾಣ ಸೆಲೆಬ್ರಿಟಿ ಖಂದಿಲ್ ಬಲೂಚ್ ಜೀವನ ಆಧರಿತ ಸಿನಿಮಾದಲ್ಲಿಯೂ ಸಬಾ ನಟಿಸಿದ್ದರು. ಸಾಮಾಜಿಕ ಜಾಲತಾಣ ಸ್ಟಾರ್ ಆಗಿದ್ದ ಖಂದಿಲ್ ಬಲೂಚ್ ಕುಟುಂಬ ಗೌರವನ್ನು ಮಣ್ಣುಪಾಲು ಮಾಡುತ್ತಿದ್ದಾಳೆ ಎಂದು ಆರೋಪಿಸಿ ಆಕೆಯ ಅಣ್ಣನೇ ಆಕೆಯನ್ನು ಕೊಲೆ ಮಾಡಿದ್ದ. ಈ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಸಬಾ ಖಮರ್ರ ಡ್ಯಾನ್ಸ್ ವಿಡಿಯೋ ಬಿಡುಗಡೆ ಆದ ಬಳಿಕ ಜಮಾತ್-ಇ-ಇಸ್ಲಾಂ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳು ನಟಿಯ ವಿರುದ್ಧ ಪ್ರತಿಭಟನೆ ಮಾಡಿದ್ದು, ಆಕೆಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿವೆ. ಸಬಾ ಖಮರ್, ಬ್ಲಾಗರ್ ಅಜೀಮ್ ಖಾನ್ ಜೊತೆ ಮದುವೆ ನಿಶ್ಚಯವಾಗಿತ್ತು, ಆದರೆ ಅಂತಿಮ ಸಮಯದಲ್ಲಿ ಮದುವೆಯನ್ನು ಮುರಿದುಕೊಂಡ ಸಬಾ, ಅಜೀಮ್ ಖಾನ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm