ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.

ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್ಶಿಪ್ ಗೆದ್ದಿದ್ದರು.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm