ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.

ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್ಶಿಪ್ ಗೆದ್ದಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm