ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.

ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್ಶಿಪ್ ಗೆದ್ದಿದ್ದರು.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm