ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.
ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್ಶಿಪ್ ಗೆದ್ದಿದ್ದರು.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am