ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.

ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್ಶಿಪ್ ಗೆದ್ದಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm