ಬ್ರೇಕಿಂಗ್ ನ್ಯೂಸ್
21-09-21 10:47 am Filmbeat: Bharath Kumar K ಸಿನಿಮಾ
ಮುಂಬೈ, ಸೆ.21: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನವಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂಪಾಯಿ ಶ್ಯೂರಿಟಿ ಪಡೆದು ಸೋಮವಾರ ಶಿಲ್ಪಾ ಶೆಟ್ಟಿ ಪತಿಗೆ ಜಾಮೀನು ನೀಡಿದ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ.
ಉದ್ಯಮಿ ರಾಜ್ ಕುಂದ್ರಾ ಜೊತೆ ಸ್ನೇಹಿತ ರಾಯನ್ ತೋರ್ಪೆಗೂ ಜಾಮೀನು ಸಿಕ್ಕಿದೆ ಎಂದು ವರದಿಯಾಗಿದೆ. ಜುಲೈ 16 ರಂದು ರಾಜ್ ಕುಂದ್ರಾ ಮತ್ತು ಇತರರನ್ನು ಮುಂಬೈ ಕ್ರೈಂ ವಿಭಾಗದ ಪೊಲೀಸರು ಅರೆಸ್ಟ್ ಮಾಡಿದ್ದರು. ಈ ಕೇಸ್ ಸಂಬಂಧ ಕಳೆದ ವಾರವಷ್ಟೇ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್ಶೀಟ್) ಸಲ್ಲಿಕೆ ಮಾಡಿದ್ದರು.

ಸೆಪ್ಟೆಂಬರ್ 16 ರಂದು ಮುಂಬೈ ಪೊಲೀಸರು 1467 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರಲ್ಲಿ 43 ಮಂದಿ ಸಾಕ್ಷಿಧಾರರ ಹೇಳಿಕೆಗಳು ದಾಖಲಾಗಿವೆ. ಐದು ವ್ಯಕ್ತಿಗಳು 164 ಸಿಆರ್ಪಿಸಿ ಪ್ರಕಾರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ. ಇದು ಎರಡನೇ ದೋಷಾರೋಪ ಪಟ್ಟಿ. ಇದಕ್ಕೂ ಮುಂಚೆ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ 3000ಕ್ಕೂ ಅಧಿಕ ಪುಟಗಳನ್ನು ಹೊಂದಿತ್ತು.
ಆ ಸಂದರ್ಭದಲ್ಲಿ ನಟಿ ಗೆಹನಾ ವಸಿಷ್ಠ ಸೇರಿದಂತೆ ಹಲವರನ್ನು ಆಗ ಬಂಧಿಸಲಾಗಿತ್ತು. ಆ ಬಂಧನಗಳ ಬಳಿಕವೇ ರಾಜ್ ಕುಂದ್ರಾ ಹೆಸರು ಹೊರಗೆ ಬಂದು ಜುಲೈ 19 ರಂದು ರಾಜ್ ಕುಂದ್ರಾ ಅನ್ನು ಮುಂಬೈ ಪೊಲೀಸರು ಬಂಧಿಸಿದರು. ರಾಜ್ ಕುಂದ್ರಾ ಅವರಿಂದ ಕೆಲವು ಲ್ಯಾಪ್ಟಾಪ್, ಮೊಬೈಲ್, ಹಾರ್ಡ್ಡಿಸ್ಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ರಾಜ್ ಕುಂದ್ರಾ ವಿರುದ್ಧದ ಆರೋಪ?
ಭಾರತದಲ್ಲಿ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಮಾರಾಟ ಅಪರಾಧವಾಗಿದ್ದು, ರಾಜ್ ಕುಂದ್ರಾರ ವಿಯಾನ್ ಸಂಸ್ಥೆ ಹಾಗೂ ಕೆಂಡ್ರಿನ್ ಕಂಪೆನಿಗಳು ಭಾರತದಲ್ಲಿಯೇ ನಟಿಯರಿಂದ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶದಲ್ಲಿರುವ ರಾಜ್ ಕುಂದ್ರಾದ ಸೋದರ ಸಂಬಂಧಿ ಪ್ರದೀಪ್ ಭಕ್ಷಿಯ ಸಂಸ್ಥೆಯ ಮೂಲಕ ಹಾಟ್ಶಾಟ್ಸ್ ಅಪ್ಲಿಕೇಶನ್ಗೆ ಅಪ್ಲೋಡ್ ಮಾಡಿಸುತ್ತಿದ್ದರು. ಹಾಟ್ಶಾಟ್ಸ್ ಆಪ್ ಮೂಲಕ ಪ್ರತಿದಿನ ಲಕ್ಷಾಂತರ ರುಪಾಯಿ ಹಣವನ್ನು ರಾಜ್ ಕುಂದ್ರಾ ಗಳಿಸುತ್ತಿದ್ದರು ಎಂದು ಮುಂಬೈ ಪೊಲೀಸರು ಆರೋಪ ಮಾಡಿದ್ದಾರೆ. ರಾಜ್ ಕುಂದ್ರಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm