ಬ್ರೇಕಿಂಗ್ ನ್ಯೂಸ್
23-09-21 01:39 pm Filmbeat: Manjunatha C ಸಿನಿಮಾ
ಜೂ.ಎನ್ಟಿಆರ್ ಕಾರುಗಳ ಬಗ್ಗೆ ವಿಶೇಷ ಆಸಕ್ತಿ ಇರುವ ನಟ. ಕೆಲವು ದಿನಗಳ ಹಿಂದಷ್ಟೆ ಐಶಾರಾಮಿ, ದುಬಾರಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಜೂ.ಎನ್ಟಿಆರ್ ಖರೀದಿಸಿದ್ದಾರೆ.
ಲ್ಯಾಂಬೊರ್ಗಿನಿ ಉರುಸ್ ಕಾರಿಗೆ 4 ಕೋಟಿಗೂ ಹೆಚ್ಚು ಹಣ ನೀಡಿರುವ ನಟ ಜೂ ಎನ್ಟಿಆರ್, ಆ ಉರುಸ್ ಕಾರಿನ ನಂಬರ್ಗೆ ಈಗ ಲಕ್ಷಾಂತರ ಹಣ ವ್ಯಯ ಮಾಡಿದ್ದಾರೆ.
ಜೂ.ಎನ್ಟಿಆರ್, ಉರುಸ್ ಕಾರಿನ ತಮ್ಮ ಅದೃಷ್ಟದ ಸಂಖ್ಯೆಯನ್ನು ಹಾಕಿಸಿಕೊಂಡಿದ್ದಾರೆ. ಅದುವೇ 9999 ಈ ಸಂಖ್ಯೆಗೆ ದೊಡ್ಡ ಮೊತ್ತದ ಹಣವನ್ನು ಆರ್ಟಿಓಗೆ ನೀಡಿದ್ದಾರೆ ಜೂ.ಎನ್ಟಿಆರ್.

ಬೇಡಿಕೆ ಇರುವ ಸಂಖ್ಯೆಗಳನ್ನು ಆರ್ಟಿಓ ಇಲಾಖೆ ಹರಾಜು ಹಾಕುತ್ತದೆ, ಸಂಖ್ಯೆ ಅವಶ್ಯಕತೆ ಇರುವವರು ಹರಾಜಿನಲ್ಲಿ ಕೂಗಿ ನಂಬರ್ ಪಡೆಯಬೇಕಾಗುತ್ತದೆ. 9999 ಬಹುಜನರ ಮೆಚ್ಚಿನ ನಂಬರ್ ಹಾಗಾಗಿ ಈ ಸಂಖ್ಯೆಗೆ ಬೇಡಿಕೆ ಹೆಚ್ಚು, ಹಾಗಾಗಿ ಹೆಚ್ಚು ಜನ ಈ ನಂಬರ್ಗೆ ಹರಾಜು ಕೂಗಿದ ಕಾರಣ ನಂಬರ್ನ ಬೆಲೆ ಏರಿದೆ. ಬೆಲೆ ಏರಿದರೂ ಬಿಡದ ಜೂ ಎನ್ಟಿಆರ್ ಬರೋಬ್ಬರಿ 17 ಲಕ್ಷ ನೀಡಿ ನಂಬರ್ ಅನ್ನು ಪಡೆದಿದ್ದಾರೆ. ಜೂ.ಎನ್ಟಿಆರ್ ಅವರ ಲ್ಯಾಂಬೊರ್ಗಿಸಿ ಉರುಸ್ ಕಾರಿನ ನಂಬರ್ ಈಗ ಟಿಎಸ್ 09 ಎಫ್ಎಸ್ 9999 ಆಗಿದೆ. 9 ಜೂ ಎನ್ಟಿಆರ್ಗೆ ಅದೃಷ್ಟದ ಸಂಖ್ಯೆಯಾಗಿದ್ದು, ನಂಬರ್ ಪ್ಲೇಟ್ನಲ್ಲಿ ಕೇವಲ 9 ಸಂಖ್ಯೆಗಳು ಮಾತ್ರವೇ ಇರುವಂತೆ ಮಾಡಿಕೊಂಡಿಕೊಂಡಿದ್ದಾರೆ ಜೂ ಎನ್ಟಿಆರ್.
ಜೂ ಎನ್ಟಿಆರ್ ಖರೀದಿಸಿರುವ ಕಾರಿನ ಎಕ್ಸ್ ಶೋರೂಂ ಬೆಲೆ 3.16 ಕೋಟಿ. ಕಾರಿನ ಆನ್ರೋಡ್ ಬೆಲೆ ಅಂದಾಜು 5 ಕೋಟಿ ಇದೆ. ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಇದಾಗಿದ್ದು, ಈ ಮಾದರಿಯ ಭಾರತದ ಮೊದಲ ಕಾರನ್ನು ಜೂ ಎನ್ಟಿಆರ್ ಖರೀದಿ ಮಾಡಿದ್ದರು. 'ದೇಶದ ಮೊದಲ ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಹೈದರಾಬಾದ್ನಲ್ಲಿ ತನ್ನ ಮನೆ ಕಂಡುಕೊಂಡಿದೆ' ಎಂದು ಸಾಮಾಜಿಕ ಜಾಲತಾಣದ ಫ್ಯಾನ್ಸ್ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದವು.
ಸ್ಯಾಂಡಲ್ವುಡ್ ನಟರಲ್ಲಿ ಮೂವರ ಬಳಿ ಲ್ಯಾಂಬರ್ಗಿನಿ ಉರುಸ್ ಕಾರಿದೆ, ಪುನೀತ್ ರಾಜ್ಕುಮಾರ್, ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಬಳಿಯೂ ಲ್ಯಾಂಬರ್ಗಿನಿ ಉರುಸ್ ಕಾರು ಇದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm