ಬ್ರೇಕಿಂಗ್ ನ್ಯೂಸ್
01-10-21 04:57 pm Filmbeat ಸಿನಿಮಾ
ಸ್ಯಾಂಡಲ್ ವುಡ್ ನಟ ಸತೀಶ್ ನೀನಾಸಂ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸತೀಶ್ ತಾಯಿ ಚಿಕ್ಕತಾಯಮ್ಮ ಇಂದು (ಅಕ್ಟೋಬರ್ 1) ಬೆಳಗ್ಗೆ ಆರ್ ಆರ್ ನಗರ ನಿವಾಸದಲ್ಲಿ ಕೊನೆಯುಸಿರೆದರು ಎನ್ನುವ ಸುದ್ದಿ ತಿಳಿದುಬಂದಿದೆ. ಚಿಕ್ಕತಾಯಮ್ಮ ಅವರಿಗೆ 85 ವರ್ಷ ವಯಸ್ಸಾಗಿತ್ತು.
ಚಿಕ್ಕತಾಯಮ್ಮ ಪುತ್ರ ಸತೀಶ್ ನೀನಾಸಂ ಅವರ ಜೊತೆಯೇ ಬೆಂಗಳೂರಿನ ಆರ್ ಆರ್ ನಗರದಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ ಚಿಕ್ಕತಾಯಮ್ಮ ಅವರ ಅಂತ್ಯಕ್ರಿಯೆ ಅವರ ಸ್ವಂತ ಊರಾದ ಮದ್ದೂರಿನ ಯಲದಳ್ಳಿಯಲ್ಲಿ ನಡೆಯಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇವತ್ತೇ ಅವರ ಅಂತ್ಯಕ್ರಿಯೆಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದ್ದು, ಪಾರ್ಥಿವ ಶರೀರ ಬೆಂಗಳೂರಿನಿಂದ ಮದ್ದೂರಿಗೆ ತೆಗೆದುಕೊಂಡು ಹೋಗಲಾಗುತ್ತಿದೆ.

ಸತೀಶ್ ಅವರ ತಾಯಿ ಚಿಕ್ಕತಾಯಮ್ಮ ಅವರು ಕಳೆದ ಒಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸತೀಶ್ ಸಿನಿಮಾ ಕೆಲಸಗಳ ಜೊತೆಗೆ ತಾಯಿಯನ್ನು ಪ್ರೀತಿಯಿಂದ ಆರೈಕೆ ಮಾಡುತ್ತಿದ್ದರು. ಆದರೀಗ ಬಾರದಲೋಕದ ಕಡೆ ಪಯಣ ಬೆಳೆಸಿದ್ದಾರೆ. 85 ವರ್ಷದ ಚಿಕ್ಕತಾಯಮ್ಮ ಅವರಿಗೆ ಒಟ್ಟು 8 ಜನ ಮಕ್ಕಳಿದ್ದರು. ಅವರಲ್ಲಿ ನಾಲ್ಕು ಗಂಡು ಮಕ್ಕಳು ಮತ್ತು ನಾಲ್ಕು ಹೆಣ್ಣು ಮಕ್ಕಳು.
ಇತ್ತೀಚಿಗಷ್ಟೆ ಸತೀಶ್ ಗೆಳೆಯ ಸಂಚಾರಿ ವಿಜಯ್ ಅವರನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದರು. ಗೆಳೆಯನ ಅಗಲಿಕೆಯ ನೋವು ಮಾಸುವ ಮುನ್ನವೇ ತಾಯಿಯನ್ನು ಕಳೆದುಕೊಂಡು ಮತ್ತಷ್ಟು ದುಃಖದಲ್ಲಿದ್ದಾರೆ. ಸತೀಶ್ ತಾಯಿಯ ನಿಧನಕ್ಕೆ ಅಭಿಮಾನಿಗಳು ಮತ್ತು ಸಿನಿ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಇನ್ನು ಸತೀಶ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗೋದ್ರ, ದಸರ, ಮೈ ನೇಮ್ ಈಸ್ ಸಿದ್ದೇಗೌಡ, ಪರಿಮಳ ಲಾಡ್ಜ್, ಪೆಟ್ರೋಮ್ಯಾಕ್ಸ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸತೀಶ್ ನಟಿಸುತ್ತಿದ್ದು, ಬಿಡುಗಡೆಗೆ ಕಾಯುತ್ತಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm