ಬ್ರೇಕಿಂಗ್ ನ್ಯೂಸ್
29-10-21 12:09 pm H K News Desk ಸಿನಿಮಾ
ಬೆಂಗಳೂರು, ಅ.29: ಕನ್ನಡದ ಹಿರಿಯ ನಟಿ ಲೀಲಾವತಿ(83) ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗುತ್ತಿದೆ. ವಯಸ್ಸಿನ ಕಾರಣದಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಲೀಲಾವತಿ ಅವರು ಇತ್ತೀಚೆಗೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಆನಂತರ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು.
ಲೀಲಾವತಿ ಅವರು ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯ ಮಗ ವಿನೋದ್ ರಾಜ್ ಜತೆ ವಾಸವಿದ್ದಾರೆ. ಕಳೆದ ಆಗಸ್ಟ್ ನಲ್ಲಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಆನಂತರ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದು ರೆಸ್ಟ್ ಅಗತ್ಯ ಇರುವ ಬಗ್ಗೆ ಸಲಹೆ ನೀಡಿದ್ದರು.
ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಲೀಲಾವತಿ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತಿದ್ದು ದ್ರವ ರೂಪದ ಆಹಾರವನ್ನು ಮಾತ್ರ ಸೇವಿಸುತ್ತಿದ್ದಾರೆನ್ನುವ ಮಾತುಗಳು ಕೇಳಿಬರುತ್ತಿವೆ. ಇದು ಅವರ ಅಪಾರ ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಹಲವು ನಟಿಯರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

1938 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಲೀಲಾಕಿರಣ್ ಹೆಸರಲ್ಲಿ ಜನಿಸಿದ್ದ ಲೀಲಾವತಿ 1950 ರಿಂದಲೇ ಚಿತ್ರರಂಗದಲ್ಲಿದ್ದಾರೆ. 1949ರಲ್ಲಿ ನಾಗಕನ್ನಿಕಾ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರಜೀವನ ಆರಂಭಿಸಿದ ಅವರು,ಕನ್ನಡ ತಮಿಳು ತೆಲುಗು ಹಾಗೂ ಮಲಯಾಳಂನ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 1999 ರಲ್ಲಿ ಚಿತ್ರರಂಗದಲ್ಲಿ ಜೀವಮಾನ ಸಾಧನೆಗಾಗಿ ನೀಡಲಾಗುವ ಡಾ.ರಾಜ್ ಕುಮಾರ್ ಪ್ರಶಸ್ತಿ ಪಡೆದಿರುವ ಲೀಲಾವತಿ, ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ.
Kannada actress Leelavathi condition serious admitted in Hospital.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm