ಬ್ರೇಕಿಂಗ್ ನ್ಯೂಸ್
17-11-21 02:00 pm HK News Desk ಸಿನಿಮಾ
ಚೆನ್ನೈ, ನ.17: ಒಂದೆಡೆ ಜೈಭೀಮ್ ಸಿನಿಮಾ ದೇಶಾದ್ಯಂತ ಹಿಟ್ ಆಗಿ ಭಾರೀ ಜನ ಮೆಚ್ಚುಗೆ ಪಡೆಯುತ್ತಿದ್ದರೆ, ತಮಿಳುನಾಡಿನಲ್ಲಿ ವನ್ನಿಯಾರ್ ಸಮುದಾಯವನ್ನು ಸಿನಿಮಾದಲ್ಲಿ ಕೀಳಾಗಿ ಚಿತ್ರಿಸಲಾಗಿದೆ ಎಂದು ಒಂದು ವರ್ಗ ಸಿನಿಮಾ ತಂಡದ ವಿರುದ್ಧ ಬೀದಿಗಿಳಿದಿದೆ. ಇದಕ್ಕಾಗಿ ಚೆನ್ನೈನಲ್ಲಿರುವ ಸಿನಿಮಾ ನಟ ಸೂರ್ಯ ಅವರ ಮನೆಗೆ ಶಸ್ತ್ರಧಾರಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಇದೇ ವೇಳೆ, ಹಿಂದುಳಿದ ಜನರನ್ನು ಪ್ರತಿನಿಧಿಸುವ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ರಾಜಕೀಯ ಪಕ್ಷದ ಮೈಲಾದುರೈ ಜಿಲ್ಲಾ ಸೆಕ್ರಟರಿ ಪನ್ನೀರ್ ಸೆಲ್ವಂ ಎಂಬವರು, ನಟ ಸೂರ್ಯ ತಮ್ಮ ಜಿಲ್ಲೆಗೆ ಬಂದ ಸಂದರ್ಭದಲ್ಲಿ ಆತನ ಮೇಲೆ ದಾಳಿ ನಡೆಸಿದರೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಎರಡು ದಿನಗಳ ಹಿಂದೆ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಮೈಲಾದುರೈನಲ್ಲಿ ಥಿಯೇಟರಿಗೆ ನುಗ್ಗಿದ್ದ ಕಾರ್ಯಕರ್ತರು ಬಲವಂತವಾಗಿ ಜೈಭೀಮ್ ಚಿತ್ರದ ಪ್ರದರ್ಶನಕ್ಕೆ ತಡೆಯೊಡ್ಡಿದ್ದರು. ಇದಲ್ಲದೆ, ನಟ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ದೂರನ್ನೂ ನೀಡಿದ್ದಾರೆ.

ಇನ್ನೊಂದು ಕಡೆ ವನ್ನಿಯಾರ್ ಸಮುದಾಯವನ್ನು ಪ್ರತಿನಿಧಿಸುವ ವನ್ನಿಯಾರ್ ಸಂಗಂ ವತಿಯಿಂದ ಸಿನಿಮಾ ತಂಡದ ವಿರುದ್ಧ ಲೀಗಲ್ ನೋಟೀಸ್ ನೀಡಲಾಗಿದೆ. ಸಮುದಾಯದ ಸಿಂಬಲನ್ನು ಬೆಂಕಿಗೆ ಹಾಕುವ ದೃಶ್ಯವನ್ನು ಸಿನಿಮಾದಿಂದ ತೆಗೆದು ಹಾಕಬೇಕು. ಅಲ್ಲದೆ, ಸಮುದಾಯಕ್ಕೆ ಅಗೌರವ ಸೂಚಿಸುವ ರೀತಿ ಚಿತ್ರಿಸಿದ್ದಕ್ಕೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಹೇಳಿ 5 ಕೋಟಿ ರೂಪಾಯಿ ಪರಿಹಾರ ಕೇಳಿ ಡಿಮ್ಯಾಂಡ್ ಮುಂದಿಟ್ಟಿದೆ.
1995ರಲ್ಲಿ ತಮಿಳುನಾಡಿನಲ್ಲಿ ಪೊಲೀಸರ ಚಿತ್ರಹಿಂಸೆಗೆ ಒಳಗಾಗಿ ಪರಿಶಿಷ್ಟ ವರ್ಗದ ಯುವಕನೊಬ್ಬ ಸಾವನ್ನಪ್ಪಿದ ನೈಜ ಘಟನೆ ಆಧರಿಸಿ, ಜೈಭೀಮ್ ಚಿತ್ರವನ್ನು ಮಾಡಲಾಗಿತ್ತು. ವಾಸ್ತವ ಕತೆಯ ಜೊತೆ ಕಾಲ್ಪನಿಕ ದೃಶ್ಯಗಳನ್ನು ಹೆಣೆದು ಪೊಲೀಸರ ಚಿತ್ರಹಿಂಸೆಯನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರದಲ್ಲಿ ವನ್ನಿಯಾರ್ ಸಮುದಾಯದ ಬಗ್ಗೆ ಹೆಸರೆತ್ತಿ ಅಗೌರವ ಸೂಚಿಸುವ ರೀತಿ ಚಿತ್ರಿಸಲಾಗಿದೆ ಎನ್ನುವುದು ವನ್ನಿಯಾರ್ ಸಂಗಂ ಆರೋಪ. ವನ್ನಿಯಾರ್ ಅಥವಾ ವನ್ನಿಯಾ ಕುಲ ಕ್ಷತ್ರಿಯ ಎನ್ನುವ ಹೆಸರಲ್ಲಿ ಗುರುತಿಸಲ್ಪಟ್ಟ ತೀರಾ ಹಿಂದುಳಿದ ಪರಿಶಿಷ್ಟ ವರ್ಗದ ಸಮುದಾಯದ ಜನರು ತಮಿಳುನಾಡಿನ ಉತ್ತರ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ವಿವಾದ ಕೇಳಿಬರುತ್ತಿದ್ದಂತೆ ತಮಿಳು ಚಿತ್ರರಂಗದ ಹೆಚ್ಚಿನ ನಟ, ನಿರ್ದೇಶಕರು ಜೈಭೀಮ್ ಚಿತ್ರ ತಂಡದ ಪರವಾಗಿ ನಿಂತಿದ್ದಾರೆ. ಅಲ್ಲದೆ, ದಕ್ಷಿಣ ಭಾರತ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪಿಎಂಕೆ ಪಕ್ಷದ ಸ್ಥಾಪಕ, ಮಾಜಿ ಸಚಿವ ಅಂಬುಮನಿ ರಾಮದಾಸ್ ಅವರಿಗೆ ಪತ್ರ ಬರೆದು, ಜೈಭೀಮ್ ಚಿತ್ರದ ವಿರುದ್ಧ ಕಾರ್ಯಕರ್ತರು ಪ್ರತಿಭಟನೆ ನಡೆಸದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
In a controversial move, the Nagapattinam district secretary of Pattali Makkal Katchi (PMK), Sithamalli Pazhani Saamy, has announced a cash reward of Rs one lakh to any youngster who attacks actor Surya. The announcement was in response to Surya's recently released movie - Jai Bhim.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm