ಬ್ರೇಕಿಂಗ್ ನ್ಯೂಸ್
03-12-21 01:44 pm HK Desk news ಸಿನಿಮಾ
ಬೆಂಗಳೂರು, ಡಿ.3: ಕನ್ನಡ ಚಿತ್ರರಂಗ ಹಿರಿಯ ನಟ ಶಿವರಾಂ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೋಮಾಕ್ಕೆ ತಲುಪಿದ್ದಾರೆಂದು ಹೇಳಲಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇತ್ತೀಚೆಗೆ ಕುಟುಂಬಸ್ಥರ ಜೊತೆ ಕಾರಿನಲ್ಲಿ ಹೊರಗೆ ಹೋಗಿದ್ದಾಗ ಅಪಘಾತ ನಡೆದಿದ್ದು, ಈ ವೇಳೆ ಶಿವರಾಂ ಅವರಿಗೂ ಸ್ವಲ್ಪ ಪೆಟ್ಟಾಗಿತ್ತು. ಆನಂತರ, ಯಾವುದೇ ತೊಂದರೆ ಇಲ್ಲವೆಂದು ಮನೆಗೆ ಕರೆ ತರಲಾಗಿತ್ತು. ಮನೆಯಲ್ಲಿದ್ದ ಅವರು ದಿಢೀರ್ ಆಗಿ ಅಸ್ವಸ್ಥರಾಗಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಪೂಜೆ ನಡೆಸಲಾಗಿದ್ದು, ಈ ವೇಳೆ ಕುಟುಂಬಸ್ಥರ ಜೊತೆ ಪೂಜಾ ಕಾರ್ಯದಲ್ಲಿ ಶಿವರಾಂ ಕೂಡ ಭಾಗವಹಿಸಿದ್ದರು. ಪೂಜೆ ಮಾಡಲು ಹೋಗಿದ್ದಾಗ ಆಯತಪ್ಪಿ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟು ತಗಲಿದೆ ಎನ್ನಲಾಗುತ್ತಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವೇಳೆ ಶಿವರಾಂ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವ ಆಗಿರುವುದು ಕಂಡುಬಂದಿತ್ತು. ಇದೀಗ ಶಿವರಾಂ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಕೋಮಾ ಸ್ಥಿತಿಗೆ ಜಾರಿದ್ದಾರೆ ಅನ್ನುವ ಮಾಹಿತಿ ಲಭಿಸಿದೆ.
ತಂದೆಯ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಪುತ್ರ ರವಿಶಂಕರ್, ತಲೆಗೆ ಪೆಟ್ಟು ತಗಲಿದ್ದರಿಂದ ತಲೆಯ ಭಾಗದ ಸ್ಕ್ಯಾನಿಂಗ್ ಮಾಡಲಾಗಿತ್ತು. ಅದರಲ್ಲಿ ಮೆದುಳಿನ ರಕ್ತಸ್ರಾವ ಆಗಿರುವುದು ಕಂಡುಬಂದಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.
ಶಿವರಾಂ ಹಿಂದಿನಿಂದಲೂ ಕನ್ನಡ ಚಿತ್ರರಂಗದಲ್ಲಿದ್ದು ನೂರಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡು ಖ್ಯಾತಿ ಗಳಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್ ಕಾಲದ ಚಿತ್ರನಟರ ಪೈಕಿ ಕೊನೆಯ ಕೊಂಡಿ ಅಂತಲೂ ಹೇಳಬಹುದು.
Veteran Kannada actor S Shivaram is in a critical condition after being hospitalised due to a head injury. The actor, who was admitted to a private hospital in Bengaluru on Tuesday, is being treated in the intensive care unit (ICU).
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm