ಬ್ರೇಕಿಂಗ್ ನ್ಯೂಸ್
03-12-21 01:44 pm HK Desk news ಸಿನಿಮಾ
ಬೆಂಗಳೂರು, ಡಿ.3: ಕನ್ನಡ ಚಿತ್ರರಂಗ ಹಿರಿಯ ನಟ ಶಿವರಾಂ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೋಮಾಕ್ಕೆ ತಲುಪಿದ್ದಾರೆಂದು ಹೇಳಲಾಗುತ್ತಿದೆ. ಎರಡು ದಿನಗಳ ಹಿಂದೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇತ್ತೀಚೆಗೆ ಕುಟುಂಬಸ್ಥರ ಜೊತೆ ಕಾರಿನಲ್ಲಿ ಹೊರಗೆ ಹೋಗಿದ್ದಾಗ ಅಪಘಾತ ನಡೆದಿದ್ದು, ಈ ವೇಳೆ ಶಿವರಾಂ ಅವರಿಗೂ ಸ್ವಲ್ಪ ಪೆಟ್ಟಾಗಿತ್ತು. ಆನಂತರ, ಯಾವುದೇ ತೊಂದರೆ ಇಲ್ಲವೆಂದು ಮನೆಗೆ ಕರೆ ತರಲಾಗಿತ್ತು. ಮನೆಯಲ್ಲಿದ್ದ ಅವರು ದಿಢೀರ್ ಆಗಿ ಅಸ್ವಸ್ಥರಾಗಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳವಾರ ರಾತ್ರಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಪೂಜೆ ನಡೆಸಲಾಗಿದ್ದು, ಈ ವೇಳೆ ಕುಟುಂಬಸ್ಥರ ಜೊತೆ ಪೂಜಾ ಕಾರ್ಯದಲ್ಲಿ ಶಿವರಾಂ ಕೂಡ ಭಾಗವಹಿಸಿದ್ದರು. ಪೂಜೆ ಮಾಡಲು ಹೋಗಿದ್ದಾಗ ಆಯತಪ್ಪಿ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟು ತಗಲಿದೆ ಎನ್ನಲಾಗುತ್ತಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವೇಳೆ ಶಿವರಾಂ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವ ಆಗಿರುವುದು ಕಂಡುಬಂದಿತ್ತು. ಇದೀಗ ಶಿವರಾಂ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಕೋಮಾ ಸ್ಥಿತಿಗೆ ಜಾರಿದ್ದಾರೆ ಅನ್ನುವ ಮಾಹಿತಿ ಲಭಿಸಿದೆ.
ತಂದೆಯ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಪುತ್ರ ರವಿಶಂಕರ್, ತಲೆಗೆ ಪೆಟ್ಟು ತಗಲಿದ್ದರಿಂದ ತಲೆಯ ಭಾಗದ ಸ್ಕ್ಯಾನಿಂಗ್ ಮಾಡಲಾಗಿತ್ತು. ಅದರಲ್ಲಿ ಮೆದುಳಿನ ರಕ್ತಸ್ರಾವ ಆಗಿರುವುದು ಕಂಡುಬಂದಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.
ಶಿವರಾಂ ಹಿಂದಿನಿಂದಲೂ ಕನ್ನಡ ಚಿತ್ರರಂಗದಲ್ಲಿದ್ದು ನೂರಾರು ಚಿತ್ರಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡು ಖ್ಯಾತಿ ಗಳಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್ ಕಾಲದ ಚಿತ್ರನಟರ ಪೈಕಿ ಕೊನೆಯ ಕೊಂಡಿ ಅಂತಲೂ ಹೇಳಬಹುದು.
Veteran Kannada actor S Shivaram is in a critical condition after being hospitalised due to a head injury. The actor, who was admitted to a private hospital in Bengaluru on Tuesday, is being treated in the intensive care unit (ICU).
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm