ಬ್ರೇಕಿಂಗ್ ನ್ಯೂಸ್
14-09-20 12:54 pm Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 13: ಕಂಗನಾ ರಣಾವತ್ ಅವರಿಗೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಮಹಾರಾಷ್ಟ್ರ ಸರಕಾರ ಕಂಗನಾ ಅವರ ಕಚೇರಿ ಹಾಗು ಮನೆ ಧ್ವಂಸ ಗೊಳಿಸಿದ ಬಳಿಕ ಭಾರಿ ಸುದ್ದಿಯಲ್ಲಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯ ಬಗ್ಗೆ ಕಂಗನಾ ಪ್ರಶ್ನಿಸುವ ಬಗೆ ಹಾಗು ತನಿಖೆಯ ದಿಕ್ಕು ತಪ್ಪಿಸಲು ಮಹಾರಾಷ್ಟ್ರ ಸರಕಾರ ಮಾಡಿರುವ ಕಸರತ್ತುಗಳ ವಿರುದ್ದ ತೊಡೆ ತಟ್ಟಿರುವ ಕಂಗನಾ ರಾಣಾವತ್ ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವಲ್ಲೇ ಜಸ್ಟ್ ಆಸ್ಕಿಂಗ್ ನ ಮೂಲಕ ವಿವಾದ ಸರಮಾಲೆಯನ್ನೇ ತೊಟ್ಟಿರುವ ನಟ ಪ್ರಕಾಶ್ ರಾಜ್ ಉರ್ಫ್ ರೈ, ಕಂಗನಾ ರಾಣಾವತ್ ಕಾಲು ಎಳೆಯೋಕೆ ಹೋಗಿ ಇದೀಗ ಸ್ವತಃ ಟ್ರೋಲ್ ಆಗಿದ್ದಾರೆ. ಸುಮ್ಮನೆ ಕೂರ್ಲಿಕ್ ಆಗದೇ ...... ಇರುವೆ ಬಿಟ್ಕೊಂಡ್ರಂತೆ. ಹೀಗಾಗಿದೆ ಪ್ರಕಾಶ್ ರೈ ಕತೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಬಳಿಕ ಬಾಲಿವುಡ್ ನಲ್ಲಿರುವ ನೆಪೋಟಿಸಂ ಬಗ್ಗೆ ಕಂಗನಾ ಧ್ವನಿ ಎತ್ತಿದ್ದರು. ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಕಂಗನಾ ಅವರನ್ನು ಟೀಕಿಸುವ ಭರದಲ್ಲಿ ಟ್ವೀಟ್ ಮಾಡಿರುವ ಪ್ರಕಾಶ್ ರೈ, ಕಂಗನಾ ರಾಣಾವತ್ ಮಣಿಕರ್ಣಿಕಾ ಚಿತ್ರದಲ್ಲಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪಾತ್ರದಲ್ಲಿ ಅಭಿನಯಿಸಿದ್ದ ಮಾತ್ರಕ್ಕೆ ಇದೀಗ ನಿಜ ಜೀವನದಲ್ಲೂ ಲಕ್ಷ್ಮೀಬಾಯಿ ಅಂದು ಕೊಂಡಿದ್ದಾರಾ ? ಎಂದು ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅದರೊಂದಿಗೆ ದೀಪಿಕಾ ಪಡಕೋಣೆ, ಹೃಿತಿಕ್ ರೋಶನ್, ಶಾರುಕ್ ಖಾನ್, ಮೊದಲಾದವರು ನಟಿಸಿದ ಚಿತ್ರಗಳ ಪೋಸ್ಟರ್ ಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನು ಇಟ್ಟುಕೊಂಡೇ ನೆಟ್ಟಿಗರು ಪ್ರಕಾಶ್ ರೈ ಅವರನ್ನೇ ಟ್ರೋಲ್ ಮಾಡಿದ್ದಾರೆ.
ಜಸ್ಟ್ ಆಸ್ಕಿಂಗ್ ಹ್ಯಾಷ್ ಟ್ಯಾಗ್ ಮೂಲಕ ಪ್ರಕಾಶ್ ರೈ ಟ್ವೀಟ್ ಮಾಡಿರೋದಕ್ಕೆ ಸಾಕಷ್ಟು ಪರ ವಿರೋಧದ ಟೀಕೆಗಳು ಕೇಳಿಬರುತ್ತಿವೆ.
Join our WhatsApp group for latest news updates
#justasking pic.twitter.com/LlJynLM1xr
— Prakash Raj (@prakashraaj) September 12, 2020
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm