ಬ್ರೇಕಿಂಗ್ ನ್ಯೂಸ್
14-09-20 12:54 pm Headline Karnataka News Network ಸಿನಿಮಾ
ಮುಂಬಯಿ, ಸಪ್ಟೆಂಬರ್ 13: ಕಂಗನಾ ರಣಾವತ್ ಅವರಿಗೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಮಹಾರಾಷ್ಟ್ರ ಸರಕಾರ ಕಂಗನಾ ಅವರ ಕಚೇರಿ ಹಾಗು ಮನೆ ಧ್ವಂಸ ಗೊಳಿಸಿದ ಬಳಿಕ ಭಾರಿ ಸುದ್ದಿಯಲ್ಲಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯ ಬಗ್ಗೆ ಕಂಗನಾ ಪ್ರಶ್ನಿಸುವ ಬಗೆ ಹಾಗು ತನಿಖೆಯ ದಿಕ್ಕು ತಪ್ಪಿಸಲು ಮಹಾರಾಷ್ಟ್ರ ಸರಕಾರ ಮಾಡಿರುವ ಕಸರತ್ತುಗಳ ವಿರುದ್ದ ತೊಡೆ ತಟ್ಟಿರುವ ಕಂಗನಾ ರಾಣಾವತ್ ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ನಡುವಲ್ಲೇ ಜಸ್ಟ್ ಆಸ್ಕಿಂಗ್ ನ ಮೂಲಕ ವಿವಾದ ಸರಮಾಲೆಯನ್ನೇ ತೊಟ್ಟಿರುವ ನಟ ಪ್ರಕಾಶ್ ರಾಜ್ ಉರ್ಫ್ ರೈ, ಕಂಗನಾ ರಾಣಾವತ್ ಕಾಲು ಎಳೆಯೋಕೆ ಹೋಗಿ ಇದೀಗ ಸ್ವತಃ ಟ್ರೋಲ್ ಆಗಿದ್ದಾರೆ. ಸುಮ್ಮನೆ ಕೂರ್ಲಿಕ್ ಆಗದೇ ...... ಇರುವೆ ಬಿಟ್ಕೊಂಡ್ರಂತೆ. ಹೀಗಾಗಿದೆ ಪ್ರಕಾಶ್ ರೈ ಕತೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಬಳಿಕ ಬಾಲಿವುಡ್ ನಲ್ಲಿರುವ ನೆಪೋಟಿಸಂ ಬಗ್ಗೆ ಕಂಗನಾ ಧ್ವನಿ ಎತ್ತಿದ್ದರು. ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಈ ನಡುವೆ ಕಂಗನಾ ಅವರನ್ನು ಟೀಕಿಸುವ ಭರದಲ್ಲಿ ಟ್ವೀಟ್ ಮಾಡಿರುವ ಪ್ರಕಾಶ್ ರೈ, ಕಂಗನಾ ರಾಣಾವತ್ ಮಣಿಕರ್ಣಿಕಾ ಚಿತ್ರದಲ್ಲಿ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪಾತ್ರದಲ್ಲಿ ಅಭಿನಯಿಸಿದ್ದ ಮಾತ್ರಕ್ಕೆ ಇದೀಗ ನಿಜ ಜೀವನದಲ್ಲೂ ಲಕ್ಷ್ಮೀಬಾಯಿ ಅಂದು ಕೊಂಡಿದ್ದಾರಾ ? ಎಂದು ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅದರೊಂದಿಗೆ ದೀಪಿಕಾ ಪಡಕೋಣೆ, ಹೃಿತಿಕ್ ರೋಶನ್, ಶಾರುಕ್ ಖಾನ್, ಮೊದಲಾದವರು ನಟಿಸಿದ ಚಿತ್ರಗಳ ಪೋಸ್ಟರ್ ಗಳನ್ನು ಪೋಸ್ಟ್ ಮಾಡಿದ್ದಾರೆ. ಇದನ್ನು ಇಟ್ಟುಕೊಂಡೇ ನೆಟ್ಟಿಗರು ಪ್ರಕಾಶ್ ರೈ ಅವರನ್ನೇ ಟ್ರೋಲ್ ಮಾಡಿದ್ದಾರೆ.
ಜಸ್ಟ್ ಆಸ್ಕಿಂಗ್ ಹ್ಯಾಷ್ ಟ್ಯಾಗ್ ಮೂಲಕ ಪ್ರಕಾಶ್ ರೈ ಟ್ವೀಟ್ ಮಾಡಿರೋದಕ್ಕೆ ಸಾಕಷ್ಟು ಪರ ವಿರೋಧದ ಟೀಕೆಗಳು ಕೇಳಿಬರುತ್ತಿವೆ.
Join our WhatsApp group for latest news updates
#justasking pic.twitter.com/LlJynLM1xr
— Prakash Raj (@prakashraaj) September 12, 2020
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm