ಬ್ರೇಕಿಂಗ್ ನ್ಯೂಸ್
02-08-20 09:03 am Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಮತ್ತು ನಿರ್ಮಾಪಕ ಸೋನು ಸೂದ್ ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಮಾನವೀಯ ಕಾರ್ಯಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಸೋನ್ ಸೂದ್ ತಾರೆಯಾಗಿ ಮಿಂಚುತ್ತಿದ್ದು, ಎಲ್ಲರೂ ಮೆಚ್ಚಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಟ ಮೂವರು ಮಕ್ಕಳನ್ನು ದತ್ತು ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಕೊರೊನಾದಿಂದ ಕೆಲಸ ಕಳೆದುಕೊಂಡಿದ್ದ ಹೈದರಾಬಾದ್ ಟೆಕ್ಕಿ ಉದ್ಯೋಗ ಕೊಡಿಸುವ ಮೂಲಕ ಸಹಾಯ ಮಾಡಿದ್ದರು. ಈಗ ತೆಲಂಗಾಣದ ಭುವನಗಿರಿ ಜಿಲ್ಲೆಯ ಮೂವರು ಅನಾಥ ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಮತ್ತೊಂದು ಮಹತ್ತರ ಕಾರ್ಯ ಮಾಡಿದ್ದಾರೆ.

ಪತ್ರಕರ್ತ ರಾಜೇಶ್ ಕರಣಂ ಅವರು ಟ್ವಿಟ್ಟರಿನಲ್ಲಿ ಸೋನು ಸೂದ್ ಅವರಿಗೆ ಟ್ಯಾಗ್ ಮಾಡುವ ಮೂಲಕ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಪೋಷಕರಿಲ್ಲದ ಮಕ್ಕಳು ತಮ್ಮ ಮನೆಯ ಕೆಲಸಗಳನ್ನು ತಾನೇ ಮಾಡುತ್ತಿದ್ದರು. ಅಲ್ಲದೇ ಹಿರಿಯ ಸಹೋದರ ತನ್ನ ಇಬ್ಬರು ಒಡಹುಟ್ಟಿದವರನ್ನು ನೋಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಈ ವಿಡಿಯೋ ಶೇರ್ ಮಾಡಿ, “ಭುವನಗಿರಿ ಜಿಲ್ಲೆಯ ಯಾದಾದ್ರಿ ಗ್ರಾಮದ ಈ ಮೂವರು ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಈ ಮೂವರು ಮಕ್ಕಳು ನೋಡಿಕೊಳ್ಳಲು ಹಿರಿಯರು ಯಾರು ಇಲ್ಲ. ಆದ್ದರಿಂದ ಇವರು ಅನಾಥರಾಗಿದ್ದಾರೆ. ಹೀಗಾಗಿ ಇವರಿಗೆ ದಯವಿಟ್ಟು ಸಹಾಯ ಮಾಡಿ” ಎಂದು ಸೋನು ಸೂದ್ ಬಳಿ ಮನವಿ ಮಾಡಿಕೊಂಡಿದ್ದರು.
ಮಕ್ಕಳ ತಂದೆ ಈಗಾಗಲೇ ಮೃತಪಟ್ಟಿದ್ದರು. ಆದರೆ ಇತ್ತೀಚೆಗೆ ತಾಯಿಯೂ ಕೂಡ ಸಾವನ್ನಪ್ಪಿದ್ದಾರೆ. ಪತ್ರಕರ್ತ ಟ್ವೀಟ್ ಮಾಡಿದ ಸುಮಾರು 15 ನಿಮಿಷದೊಳಗೆ ಪ್ರತಿಕ್ರಿಯಿಸಿದ ಸೋನು ಸೂದ್, “ಅವರು ಇನ್ನು ಮುಂದೆ ಅನಾಥರಲ್ಲ. ಅವರು ನನ್ನ ಜವಾಬ್ದಾರಿಯಾಗುತ್ತಾರೆ” ಎಂದು ಭರವಸೆ ನೀಡಿದ್ದಾರೆ.
ಕೊಟ್ಟ ಮಾತಿನಿಂತೆ ಸೋನು ಸೂದ್ ತಮ್ಮ ಅಧಿಕಾರಿಗಳನ್ನು ಕಳುಹಿಸಿ ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಟ್ವಿಟ್ಟರಿನಲ್ಲಿ ನೆಟ್ಟಿಗರು ಸೋನ್ ಸೂದ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm