ಬ್ರೇಕಿಂಗ್ ನ್ಯೂಸ್
25-12-21 01:12 pm Mangalore Correspondent ಸಿನಿಮಾ
ಮಂಗಳೂರು, ಡಿ.25 : ಗುಳಿ ಕೆನ್ನೆಯ ಚೆಲುವೆ, ನಟಿ ರಚಿತಾ ರಾಮ್ ಮಂಗಳೂರಿನ ಪೊಲೀಸರಲ್ಲಿ ಮಿಂಚು ಹರಿಸಿದ್ದಾರೆ. ಪೊಲೀಸ್ ಕಮಿಷನರ್ ಶಶಿಕುಮಾರ್ ಕರೆಯಂತೆ, ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ನಟಿ ರಚಿತಾ ಪೊಲೀಸರ ಜೊತೆಗೆ ಬೆರೆತು ಹರಟಿದ್ದಾರೆ.
ದೇವಸ್ಥಾನ ಭೇಟಿ ಸೇರಿದಂತೆ ಖಾಸಗಿ ಕಾರ್ಯಕ್ರಮಕ್ಕೆಂದು ರಚಿತಾ ಮಂಗಳೂರಿಗೆ ಆಗಮಿಸಿದ್ದರು. ಪಬ್ಬಾಸ್ ನಲ್ಲಿ ಐಸ್ ಕ್ರೀಮ್ ತಿಂದು ಹೋಗೋಣ ಎಂದು ಲಾಲ್ ಬಾಗ್ ಬಂದಿದ್ರಂತೆ. ಅಷ್ಟೊತ್ತಿಗೆ ಕಮಿಷನರ್ ಶಶಿಕುಮಾರ್ ಫೋನ್ ಮಾಡಿದ್ದು, ಕಚೇರಿಗೆ ಬರುವಂತೆ ಹೇಳಿದ್ದಾರೆ. ಅದರಂತೆ, ಕಚೇರಿಗೆ ಬಂದ ನಟಿಯನ್ನು ಪೊಲೀಸರು ಮುತ್ತಿಕೊಂಡಿದ್ದಾರೆ.


ಸಿನಿಮಾದಲ್ಲಿ ನೋಡಿದ್ದ ಪೊಲೀಸರು ನಟಿಯನ್ನು ಕಾಣುತ್ತಲೇ ಸೆಲ್ಫಿ ಕ್ಲಿಕ್ಕಿಸಿದ್ದೇ ಕ್ಲಿಕ್ಕಿಸಿದ್ದು. ನಟಿಯ ಅಕ್ಕ ಪಕ್ಕದಲ್ಲಿ ನಿಂತು ಥರಹೇವಾರಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡರು. ಮಹಿಳಾ ಪೊಲೀಸ್ ಪೇದೆಯರು, ಕಮಿಷನರ್ ಕಚೇರಿಯ ಉದ್ಯೋಗಸ್ಥ ಸಿಬಂದಿ, ಪೊಲೀಸ್ ಅಧಿಕಾರಿಗಳೆಲ್ಲ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದರು. ಇದೇ ವೇಳೆ, ಪೊಲೀಸರ ವತಿಯಿಂದ ಕಮಿಷನರ್ ಶಶಿಕುಮಾರ್ ರಚಿತಾ ರಾಮ್ ಅವರನ್ನು ಸನ್ಮಾನಿಸಿದರು. ಕರಾವಳಿಯ ಯಕ್ಷಗಾನದ ಕಿರೀಟವುಳ್ಳ ಸ್ಮರಣಿಕೆ, ಶಾಲು ಹೊದೆಸಿ ಸನ್ಮಾನಿಸಿದ್ದು ವಿಶೇಷವಾಗಿತ್ತು.



ಇದೇ ವೇಳೆ, ಮಾತನಾಡಿದ ನಟಿ ತಮ್ಮ ಚೆಲ್ಲು ಚೆಲ್ಲು ಮಾತುಗಳಿಂದಲೇ ಪೊಲೀಸರನ್ನು ಆಕರ್ಷಿಸಿದರು. ಏನೋ ಆಕಸ್ಮಿಕವಾಗಿ ಬಂದಿದ್ದೇನೆ. ಯಾವುದೇ ಮೇಕಪ್ ಮಾಡಿಕೊಂಡಿಲ್ಲ ಎಂದು ನಗುತ್ತಾ ಇಲ್ಲಿ ಬರೋದಿಕ್ಕೆ ಶಶಿ ಸರ್ ಕಾರಣ ಎಂದು ಹೇಳಿದರು. ನನಗೂ ಸಣ್ಣಂದಿನಲ್ಲಿ ಐಪಿಎಸ್ ಅಧಿಕಾರಿಯಾಗಬೇಕು ಎಂಬ ಆಸೆ ಇತ್ತು. ಆದರೆ ಈಡೇರಲಿಲ್ಲ. ಬದಲಿಗೆ ನಟಿಯಾಗಿದ್ದೇನೆ. ನಟಿಯಾಗಿ ಸಾಧಾರಣ ಎಲ್ಲ ರೀತಿಯ ಪಾತ್ರಗಳನ್ನು ಮಾಡಿದ್ದೇನೆ. ಪೊಲೀಸ್ ಅಧಿಕಾರಿಯಾಗುವ ಪಾತ್ರ ಇನ್ನೂ ಸಿಕ್ಕಿಲ್ಲ. ಅಂಥ ಉತ್ತಮ ಚಿತ್ರಕತೆ ಸಿಕ್ಕಿದರೆ ಮಾಡಬೇಕೆಂದಿದ್ದೇನೆ ಎಂದು ಹೇಳಿದರು.



ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಪೊಲೀಸರು ತಮ್ಮ ಜೀವ ಲೆಕ್ಕಿಸದೆ ಕೆಲಸ ಮಾಡಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ. ಎಲ್ಲರೂ ಖುಷಿಯಿಂದಿರಿ. ಖುಷಿಯಿಂದ ಜೀವನ ಎಂಜಾಯ್ ಮಾಡಿ. ಇವತ್ತು ಹೀಗಿದ್ದೇವೆ, ನಾಳೆ ಹೇಗಿರುತ್ತೇವೋ ಗೊತ್ತಿಲ್ಲ. ಅದಕ್ಕಾಗಿ ಪಾಸಿಟಿವ್ ಆಗಿ ಯೋಚಿಸುತ್ತಾ ಖುಷಿಯಿಂದಿರಬೇಕು ಎನ್ನುತ್ತಾ ಪುನೀತ್ ಹೆಸರೇಳದೆ, ಅಂದಿನ ಘಟನೆಯನ್ನು ಮೆಲುಕು ಹಾಕಿದರು. ಮುಂದಿನ ವಾರ ತನ್ನ ಹೊಸ ಫಿಲ್ಮ್ ಬರ್ತಿದೆ, ಎಲ್ಲರೂ ನೋಡಿ. ಸಪೋರ್ಟ್ ಮಾಡಿ ಎನ್ನುತ್ತಾ ಬೈ ಬೈ ಹೇಳಿದರು.
Actress Rachita Ram in Mangalore, facilitated by Police Commissioner Shahi Kumar and staffs. Police personals thronged for selfies. Also Rachita thanked the Mangalore police department for their overwhelm love and care.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm