ಮತ್ತೆ ನಟಿ ರಾ'ಗಿಣಿ'ಗೆ ಬಿಗ್ ಶಾಕ್ ; ಜಾಮೀನು ಅರ್ಜಿ ಮುಂದೂಡಿಕೆ

16-09-20 01:10 pm       Headline Karnataka News Network   ಸಿನಿಮಾ

ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನ ನ್ಯಾಯಾಲಯ ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.

ಬೆಂಗಳೂರು, ಸೆಪ್ಟೆಂಬರ್ 16: ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನ ನ್ಯಾಯಾಲಯ ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.

ಸೋಮವಾರ ನ್ಯಾಯಾಲಯ ನಟಿ ರಾಗಿಣಿ ದ್ವಿವೇದಿಯನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇಂದು ಜಾಮೀನು ಕೋರಿ ರಾಗಿಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಾಲಯದ ಮುಂದೆ ಬಂದಿತ್ತು. ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕೆಂದು ಸಿಸಿಬಿ ಪರ ವಕೀಲರು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ಜಾಮೀನು ಅರ್ಜಿಯ ವಿಚಾರಣೆಯನ್ನ ಸೆ.19ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

Join our WhatsApp group for latest news updates