ಬ್ರೇಕಿಂಗ್ ನ್ಯೂಸ್
18-01-22 12:11 pm HK Desk news ಸಿನಿಮಾ
ಹೈದರಾಬಾದ್, ಜ 18 : ಕಾಲಿವುಡ್ ನಟ ಧನುಷ್ ಹಾಗೂ ರಜಿನಿಕಾಂತ್ ಪುತ್ರಿ ಐಶ್ವರ್ಯಾ ಪರಸ್ಪರ ದೂರಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ 18 ವರ್ಷಗಳ ವೈವಾಹಿಕ ಜೀವನ ಅಂತ್ಯಗೊಂಡಂತಾಗಿದೆ.
2004 ರಲ್ಲಿ ಐಶ್ವರ್ಯಾ ಹಾಗೂ ಧನುಷ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದೀಗ 18 ವರ್ಷಗಳ ದಾಂಪತ್ಯ ಜೀವನ ಅಂತ್ಯ ಹಾಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ತಾವು ದೂರವಾಗುತ್ತಿರುವ ಬಗ್ಗೆ ಅಧಿಕೃತ ಮಾಹಿತಿಯನ್ನು ಧನುಷ್ ಮತ್ತು ಐಶ್ವರ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಾವಿಬ್ಬರು 18 ವರ್ಷಗಳಿಂದ ಸ್ನೇಹಿತರಾಗಿ, ಪ್ರೇಮಿಗಳಾಗಿ, ದಂಪತಿಯಾಗಿ , ಪೋಷಕರಾಗಿ, ಪರಸ್ಪರ ಒಳ್ಳೆಯದನ್ನು ಬಯಸುತ್ತಾ, ಅರ್ಥಮಾಡಿಕೊಳ್ಳುತ್ತಾ, ಸಹಕರಿಸುತ್ತಾ ಜೀವನ ನಡೆಸಿದ್ದೇವೆ. ಒಬ್ಬರಿಗೆ ಒಬ್ಬರು ಆಸರೆಯಾಗಿದ್ದೇವೆ. ಇಂದು ನಮ್ಮಿಬ್ಬರ ದಾರಿ ಬೇರೆ ಬೇರೆಯಾಗಿದೆ. ನಾನು ಹಾಗೂ ಐಶ್ವರ್ಯಾ ಸಮಯ ತೆಗೆದುಕೊಂಡು ಕೊನೆಗೆ ತೀರ್ಮಾನಿಸಿ ಪರಸ್ಪರ ಒಪ್ಪಿ ದಾಂಪತ್ಯ ಜೀವನದಿಂದ ದೂರಾಗುತ್ತಿದ್ದೇವೆ. ನಮ್ಮ ನಿರ್ಧಾರಕ್ಕೆ ನಿಮ್ಮ ಬೆಂಬಲ ಹಾಗೂ ಸಹಕಾರ ಇರಲಿ ಎಂದು ಆಶಿಸುತ್ತೇನೆ. ದಯಮಾಡಿ ನಮ್ಮ ಖಾಸಗಿ ನಿರ್ಧಾರವನ್ನು ಗೌರವಿಸಿ ಎಂದು ಧನುಷ್ ಟ್ವೀಟ್ ಮಾಡಿದ್ದಾರೆ.
ಧನುಷ್ ಅವರ ಪೋಸ್ಟ್ನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡ ಐಶ್ವರ್ಯಾ, ಇದಕ್ಕೆ ಶೀರ್ಷಿಕೆ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ನಿಮ್ಮ ಪ್ರೀತಿ ಮಾತ್ರ ಅಗತ್ಯ ಎಂದು ಬರೆದುಕೊಂಡು ದಾಂಪತ್ಯ ಜೀವನದಿಂದ ಇಬ್ಬರು ದೂರವಾಗುತ್ತಿರುವ ಕುರಿತಾಗಿ ತಿಳಿಸಿದ್ದಾರೆ.
ದಂಪತಿಗೆ ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. 2006 ಮತ್ತು 2010 ರಲ್ಲಿ ಜನಿಸಿದವರಾಗಿದ್ದಾರೆ. ಐಶ್ವರ್ಯಾ ಅವರ ಮೊದಲ ನಿರ್ದೇಶನದ ‘3’ ನಲ್ಲಿ ಧನುಷ್ ಕೆಲಸ ಮಾಡಿದ್ದರು ಮತ್ತು ಚಿತ್ರದ ‘ಕೊಲವೆರಿ ಡಿ’ ಹಾಡು ಸೂಪರ್ ಹಿಟ್ ಆಗಿ ಎಲ್ಲಾ ಕಡೆ ಸದ್ದು ಮಾಡಿತ್ತು.
ಎರಡನೇ ಪುತ್ರಿ ಸೌಂದರ್ಯ ಕೂಡ ಮೊದಲ ಮದುವೆ ಮುರಿದುಕೊಂಡು ಕೆಲವೇ ವರ್ಷಗಳ ಹಿಂದೆ ಎರಡನೇ ವಿವಾಹವಾಗಿದ್ದರು. ರಜನಿಕಾಂತ್ ಮೊದಲ ಪುತ್ರಿ ಐಶ್ವರ್ಯಾ ದಾಂಪತ್ಯವೂ ಮುರಿದುಬಿದ್ದಿದೆ.
Choosing to end their 18-year-long marriage, actor Dhanush and director Aishwaryaa Dhanush, who also happens to be the daughter of superstar Rajinikanth, have announced that they have decided to part ways. Late on Monday night, both the actor and the director put out a letter, which looked similar for the most part, on their respective social media handles. Dhanush, who was most recently seen with Sara Ali Khan in ‘Atrangi Re’, shared his letter on Twitter, Aishwarya chose Instagram.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm