ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm