ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm