ಬ್ರೇಕಿಂಗ್ ನ್ಯೂಸ್
19-02-22 11:26 am Bengaluru Correspondent ಸಿನಿಮಾ
ಬೆಂಗಳೂರು, ಫೆ.19 : ಹಿರಿಯನಟ, ಕಲಾತಪಸ್ವಿ ರಾಜೇಶ್(87) ಇನ್ನು ನೆನಪು ಮಾತ್ರ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರೀನಿ ನಟನೆಯ ಓಲ್ಡ್ ಮಾಂಕ್ ಅವ್ರ ಕಟ್ಟ ಕಡೆಯ ಸಿನಿಮಾ ಆಗಿತ್ತು. ಇವ್ರ ಮೂಲ ಹೆಸರು ಮುನಿ ಚೌಡಪ್ಪ. ವಿದ್ಯಾಸಾಗರ್ ಹೆಸರಿನಿಂದ ರಂಗಭೂಮಿಯಲ್ಲಿ ಕಲಾವಿದರಾಗಿ ಗುರ್ತಿಸಿಕೊಂಡಿದ್ದರು. ಬಳಿಕ ಶಕ್ತಿ ನಾಟಕ ಮಂಡಳಿ ಕಟ್ಟಿ ರಂಗಕರ್ಮಿಯಾಗಿ ಹೆಸರು ಮಾಡಿದ್ದರು.

ನಿರುದ್ಯೋಗಿ ಬಾಳು, ಬಡವನ ಬಾಳು, ವಿಷ ಸರ್ಪ, ನಂದಾ ದೀಪ, ಕಿತ್ತೂರು ರಾಣಿ ಚೆನ್ನಮ್ಮ ನಾಟಕಗಳಲ್ಲಿ ಅಭಿನಯಿಸಿ ಜನಪ್ರಿಯತೆ ಗಳಿಸಿದ್ದರು. 60ರ ದಶಕದಲ್ಲಿ ವೀರ ಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ. 1968ರ ನಮ್ಮ ಊರು ಚಿತ್ರದಲ್ಲಿ ರಾಜೇಶ್ ಅಂತ ಹೆಸರು ಬದಲಿಸಿಕೊಂಡಿದ್ದರು.


ಕಪ್ಪು ಬಿಳುಪು, ಎರಡು ಮುಖ, ಪುಣ್ಯ ಪುರುಷ, ದೇವರ ಗುಡಿ, ಕಾವೇರಿ, ಕ್ರಾಂತಿ ವೀರ ಸೇರಿದಂತೆ 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಸಹನಟರಾಗಿ ಭಾರೀ ಖ್ಯಾತಿ ಗಳಿಸಿದ್ದರು. ಅವ್ರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೌರವ ನೀಡಲಾಗಿತ್ತು.

ಮಗಳು ನಿವೇದಿತಾಗೆ ನಟ ಅರ್ಜುನ್ ಸರ್ಜಾ ಜೊತೆ ಕಲ್ಯಾಣ ಆಗಿತ್ತು. ರಥಸಪ್ತಮಿ ಚಿತ್ರದಲ್ಲಿ ಮಗಳು ನಿವೇದಿತಾ ನಟಿಸಿದ್ದರು. ಅಳಿಯ, ಮಗಳು, ಮೊಮ್ಮಗಳು ಸೇರಿದಂತೆ ಇವರ ಇಡೀ ಕುಟುಂಬ ಸಿನಿಮಾ ರಂಗದಲ್ಲಿರುವುದು ವಿಶೇಷ.
Popular veteran Kannada actor Rajesh, also fondly known as Kala Thapaswi, passes away at 89 due to age-related issues. Since February 9, the actor was hospitalised and was undergoing treatment in Bengaluru due to age-related ailments. However, despite several efforts, he breathed last at midnight at 2:30 AM.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm