ಬ್ರೇಕಿಂಗ್ ನ್ಯೂಸ್
23-03-22 08:05 pm HK Desk news ಸಿನಿಮಾ
ಮುಂಬೈ, ಮಾ.23: ಕಾಶ್ಮೀರಿ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಕಾರ್ಯಕರ್ತರ ಮನಸೂರೆಗೊಳ್ಳುತ್ತಲೇ, ಬಾಲಿವುಡ್ ನಲ್ಲಿ ಅದೇ ರೀತಿಯ ಮತ್ತೊಂದು ಚಿತ್ರ ತೆರೆಗೆ ತರಲು ಸಿದ್ಧತೆ ನಡೆದಿದೆ. ಹಿಂದು ಹೃದಯ ಸಾಮ್ರಾಟ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರು ಪಡೆದಿರುವ ವೀರ ಸಾವರ್ಕರ್ ಜೀವನ ಸಾಧನೆಯನ್ನು ಆಧರಿಸಿ ಸಿನಿಮಾ ತಯಾರಿಸಲು ಚಿತ್ರತಂಡ ಮುಂದಾಗಿದೆ.
ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ರಾಜಬೀರ್, ಸುಖದೇವ್, ಭಗತ್ ಸಿಂಗ್ ಬಲಿದಾನದ ಮಾರ್ಚ್ 23ರಂದೇ ವೀರ ಸಾವರ್ಕರ್ ಚಿತ್ರ ಮಾಡುವುದಾಗಿ ಚಿತ್ರ ನಿರ್ದೇಶಕ ಮಹೇಶ್ ಮಾಂಜ್ರೇಕರ್ ಹೇಳಿದ್ದಾರೆ. ಸಾವರ್ಕರ್ ಪಾತ್ರದಲ್ಲಿ ರಣದೀಪ್ ಹೂಡಾ ಕಾಣಿಸಿಕೊಳ್ಳಲಿದ್ದಾರೆ.
ಸಾವರ್ಕರ್ ಜೀವನ ಕತೆಯನ್ನು ಆಧರಿಸಿ ಚಿತ್ರ ಮಾಡಲಾಗುತ್ತಿದೆ ಎಂದು ಚಿತ್ರದ ನಿರ್ಮಾಪಕರಾದ ಆನಂದ್ ಪಂಡಿತ್ ಹಾಗೂ ಸಂದೀಪ್ ಸಿಂಗ್ ಹೇಳಿದ್ದಾರೆ. ಸಾವರ್ಕರ್ ಪಾತ್ರ ಮಾಡುವುದು ತನಗೆ ದೊರೆತ ಗೌರವ ಎಂದು ನಟ ರಣದೀಪ್ ಹೂಡ ಹೇಳಿದ್ದಾರೆ. ಬಯೋಪಿಕ್ ಸಿನಿಮಾಗಳು ಬಾಲಿವುಡ್ ನಲ್ಲಿ ಹೆಚ್ಚು ಸದ್ದು ಮಾಡಿಲ್ಲವಾದರೂ, ನೈಜ ಕತೆ ಆಧರಿತ ಕಾಶ್ಮೀರ್ ಫೈಲ್ಸ್ ಬಿಜೆಪಿ ಮತ್ತು ಹಿಂದು ಸಂಘಟನೆಗಳ ಆಕರ್ಷಣೆಗೆ ಕಾರಣವಾಗಿದ್ದರಿಂದ ಸಾವರ್ಕರ್ ಚಿತ್ರಕ್ಕೂ ಅದೇ ರೀತಿಯ ವೀಕ್ಷಕ ವರ್ಗ ಹುಟ್ಟಿಕೊಳ್ಳಲಿದೆ ಎಂಬ ಲೆಕ್ಕ ಹಾಕಿಕೊಂಡು ಈ ಚಿತ್ರ ನಿರ್ಮಿಸಲಾಗುತ್ತಿದೆ ಎನ್ನಲಾಗುತ್ತಿದೆ.
Last year, a biopic on Vinayak Damodar Savarkar aka Veer Savarkar was announced to be helmed by filmmaker and actor Mahesh Manjrekar. Almost a year later, the makers have now announced Randeep Hooda as the lead star.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm